Categories: Crime

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಮವಾರ (ಫೆ.16) ಮಧ್ಯಾಹ್ನ ಬಿಇಎಲ್ ಬಡಾವಣೆಯ ಹೊಂಬಾಳೆಗೌಡರ ಮನೆಯಲ್ಲಿ ದರೋಡೆ ನಡೆದಿದೆ.

ಘಟನೆ ವೇಳೆ ಹೊಂಬಾಳೆಗೌಡ (53), ಪತ್ನಿ ಮಂಗಳಮ್ಮ ಮತ್ತು ಎರಡೂವರೆ ವರ್ಷದ ಮೊಮ್ಮಗು ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಖಾಸಗಿ ಕಾರಿನಲ್ಲಿ ಯಲಹಂಕ ಪೊಲೀಸರು ಎಂದು ಹೇಳಿ ಸಬ್ ಇನ್ಸ್ಪೆಕ್ಟರ್ ಯೂನಿಫಾರ್ಮ್ ಧರಿಸಿ ಕೈಯಲ್ಲಿ ಡೈರಿ ಹಿಡಿದು ಒಬ್ಬ ಎಂಟ್ರಿ ಕೊಟ್ಟಿದ್ದು, ಹಿಂದೆ ಕ್ರೈಮ್ ಪಿಸಿ ರೀತಿ ಬ್ಯಾಗ್ ಹಾಕಿಕೊಂಡು ಮತ್ತೊಬ್ಬ ಎಂಟ್ರಿ ಕೊಟ್ಟಿದ್ದಾನೆ.

ಮೊದಲು ಮನೆಗೆ ನುಗ್ಗಿ ಗನ್ ಮತ್ತು ಚಾಕು ತೋರಿಸಿ, ಮನೆ ಮಾಲೀಕರನ್ನ ಲಾಕ್ ಮಾಡಿದ್ದಾರೆ. ನಂತರ ಹೊಂಬಾಳೆ ಗೌಡ ಹಾಗೂ ಮಂಗಳಮ್ಮಗೆ ಟೇಪ್ ಸುತ್ತಿ ಕೂರಿಸಿದ್ದಾರೆ. ಬಳಿಕ ಬೆಡ್‌ರೂಮ್ ಜಾಲಾಡಿ ಸುಮಾರು 20 ಲಕ್ಷ ರೂ. ಹಾಗೂ ಅರ್ಧ ಕೆಜಿ ಚಿನ್ನಾಭರಣ ದೋಚಿದ್ದಾರೆ.

ಇದೇ ವೇಳೆ ಆರೋಪಿಗಳ ಕೃತ್ಯಕ್ಕೆ ಬೆದರಿ ಹೊಂಬಾಳೆಗೌಡರು ಹಣ, ಒಡವೆ ಕೊಟ್ಟಿದ್ದಾರೆ. ಕೊನೆಗೆ ಪತ್ನಿ ಮಾಂಗಲ್ಯ ಬೇಕಾದ್ರೂ ತಗೊಳಿ ಎಂದಿದ್ದಕ್ಕೆ ಆರೋಪಿಗಳು ಬೇಡ ಎಂದು ಬಿಟ್ಟು ಹೋಗಿದ್ದಾರೆ.

ಪರಾರಿಯಾಗುವ ಇಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದಾರೆ. ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳಚಿಕೊಂಡು ಹೋಗಿದ್ದಾರೆ.

ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

9 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

10 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

22 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago