ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ (ಫೆ.16) ಮಧ್ಯಾಹ್ನ ಬಿಇಎಲ್ ಬಡಾವಣೆಯ ಹೊಂಬಾಳೆಗೌಡರ ಮನೆಯಲ್ಲಿ ದರೋಡೆ ನಡೆದಿದೆ.
ಘಟನೆ ವೇಳೆ ಹೊಂಬಾಳೆಗೌಡ (53), ಪತ್ನಿ ಮಂಗಳಮ್ಮ ಮತ್ತು ಎರಡೂವರೆ ವರ್ಷದ ಮೊಮ್ಮಗು ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ಖಾಸಗಿ ಕಾರಿನಲ್ಲಿ ಯಲಹಂಕ ಪೊಲೀಸರು ಎಂದು ಹೇಳಿ ಸಬ್ ಇನ್ಸ್ಪೆಕ್ಟರ್ ಯೂನಿಫಾರ್ಮ್ ಧರಿಸಿ ಕೈಯಲ್ಲಿ ಡೈರಿ ಹಿಡಿದು ಒಬ್ಬ ಎಂಟ್ರಿ ಕೊಟ್ಟಿದ್ದು, ಹಿಂದೆ ಕ್ರೈಮ್ ಪಿಸಿ ರೀತಿ ಬ್ಯಾಗ್ ಹಾಕಿಕೊಂಡು ಮತ್ತೊಬ್ಬ ಎಂಟ್ರಿ ಕೊಟ್ಟಿದ್ದಾನೆ.
ಮೊದಲು ಮನೆಗೆ ನುಗ್ಗಿ ಗನ್ ಮತ್ತು ಚಾಕು ತೋರಿಸಿ, ಮನೆ ಮಾಲೀಕರನ್ನ ಲಾಕ್ ಮಾಡಿದ್ದಾರೆ. ನಂತರ ಹೊಂಬಾಳೆ ಗೌಡ ಹಾಗೂ ಮಂಗಳಮ್ಮಗೆ ಟೇಪ್ ಸುತ್ತಿ ಕೂರಿಸಿದ್ದಾರೆ. ಬಳಿಕ ಬೆಡ್ರೂಮ್ ಜಾಲಾಡಿ ಸುಮಾರು 20 ಲಕ್ಷ ರೂ. ಹಾಗೂ ಅರ್ಧ ಕೆಜಿ ಚಿನ್ನಾಭರಣ ದೋಚಿದ್ದಾರೆ.
ಇದೇ ವೇಳೆ ಆರೋಪಿಗಳ ಕೃತ್ಯಕ್ಕೆ ಬೆದರಿ ಹೊಂಬಾಳೆಗೌಡರು ಹಣ, ಒಡವೆ ಕೊಟ್ಟಿದ್ದಾರೆ. ಕೊನೆಗೆ ಪತ್ನಿ ಮಾಂಗಲ್ಯ ಬೇಕಾದ್ರೂ ತಗೊಳಿ ಎಂದಿದ್ದಕ್ಕೆ ಆರೋಪಿಗಳು ಬೇಡ ಎಂದು ಬಿಟ್ಟು ಹೋಗಿದ್ದಾರೆ.
ಪರಾರಿಯಾಗುವ ಇಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದಾರೆ. ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳಚಿಕೊಂಡು ಹೋಗಿದ್ದಾರೆ.
ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…