ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ (ಫೆ.16) ಮಧ್ಯಾಹ್ನ ಬಿಇಎಲ್ ಬಡಾವಣೆಯ ಹೊಂಬಾಳೆಗೌಡರ ಮನೆಯಲ್ಲಿ ದರೋಡೆ ನಡೆದಿದೆ.
ಘಟನೆ ವೇಳೆ ಹೊಂಬಾಳೆಗೌಡ (53), ಪತ್ನಿ ಮಂಗಳಮ್ಮ ಮತ್ತು ಎರಡೂವರೆ ವರ್ಷದ ಮೊಮ್ಮಗು ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ಖಾಸಗಿ ಕಾರಿನಲ್ಲಿ ಯಲಹಂಕ ಪೊಲೀಸರು ಎಂದು ಹೇಳಿ ಸಬ್ ಇನ್ಸ್ಪೆಕ್ಟರ್ ಯೂನಿಫಾರ್ಮ್ ಧರಿಸಿ ಕೈಯಲ್ಲಿ ಡೈರಿ ಹಿಡಿದು ಒಬ್ಬ ಎಂಟ್ರಿ ಕೊಟ್ಟಿದ್ದು, ಹಿಂದೆ ಕ್ರೈಮ್ ಪಿಸಿ ರೀತಿ ಬ್ಯಾಗ್ ಹಾಕಿಕೊಂಡು ಮತ್ತೊಬ್ಬ ಎಂಟ್ರಿ ಕೊಟ್ಟಿದ್ದಾನೆ.
ಮೊದಲು ಮನೆಗೆ ನುಗ್ಗಿ ಗನ್ ಮತ್ತು ಚಾಕು ತೋರಿಸಿ, ಮನೆ ಮಾಲೀಕರನ್ನ ಲಾಕ್ ಮಾಡಿದ್ದಾರೆ. ನಂತರ ಹೊಂಬಾಳೆ ಗೌಡ ಹಾಗೂ ಮಂಗಳಮ್ಮಗೆ ಟೇಪ್ ಸುತ್ತಿ ಕೂರಿಸಿದ್ದಾರೆ. ಬಳಿಕ ಬೆಡ್ರೂಮ್ ಜಾಲಾಡಿ ಸುಮಾರು 20 ಲಕ್ಷ ರೂ. ಹಾಗೂ ಅರ್ಧ ಕೆಜಿ ಚಿನ್ನಾಭರಣ ದೋಚಿದ್ದಾರೆ.
ಇದೇ ವೇಳೆ ಆರೋಪಿಗಳ ಕೃತ್ಯಕ್ಕೆ ಬೆದರಿ ಹೊಂಬಾಳೆಗೌಡರು ಹಣ, ಒಡವೆ ಕೊಟ್ಟಿದ್ದಾರೆ. ಕೊನೆಗೆ ಪತ್ನಿ ಮಾಂಗಲ್ಯ ಬೇಕಾದ್ರೂ ತಗೊಳಿ ಎಂದಿದ್ದಕ್ಕೆ ಆರೋಪಿಗಳು ಬೇಡ ಎಂದು ಬಿಟ್ಟು ಹೋಗಿದ್ದಾರೆ.
ಪರಾರಿಯಾಗುವ ಇಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದಾರೆ. ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳಚಿಕೊಂಡು ಹೋಗಿದ್ದಾರೆ.
ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…