ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ (ಫೆ.16) ಮಧ್ಯಾಹ್ನ ಬಿಇಎಲ್ ಬಡಾವಣೆಯ ಹೊಂಬಾಳೆಗೌಡರ ಮನೆಯಲ್ಲಿ ದರೋಡೆ ನಡೆದಿದೆ.
ಘಟನೆ ವೇಳೆ ಹೊಂಬಾಳೆಗೌಡ (53), ಪತ್ನಿ ಮಂಗಳಮ್ಮ ಮತ್ತು ಎರಡೂವರೆ ವರ್ಷದ ಮೊಮ್ಮಗು ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ಖಾಸಗಿ ಕಾರಿನಲ್ಲಿ ಯಲಹಂಕ ಪೊಲೀಸರು ಎಂದು ಹೇಳಿ ಸಬ್ ಇನ್ಸ್ಪೆಕ್ಟರ್ ಯೂನಿಫಾರ್ಮ್ ಧರಿಸಿ ಕೈಯಲ್ಲಿ ಡೈರಿ ಹಿಡಿದು ಒಬ್ಬ ಎಂಟ್ರಿ ಕೊಟ್ಟಿದ್ದು, ಹಿಂದೆ ಕ್ರೈಮ್ ಪಿಸಿ ರೀತಿ ಬ್ಯಾಗ್ ಹಾಕಿಕೊಂಡು ಮತ್ತೊಬ್ಬ ಎಂಟ್ರಿ ಕೊಟ್ಟಿದ್ದಾನೆ.
ಮೊದಲು ಮನೆಗೆ ನುಗ್ಗಿ ಗನ್ ಮತ್ತು ಚಾಕು ತೋರಿಸಿ, ಮನೆ ಮಾಲೀಕರನ್ನ ಲಾಕ್ ಮಾಡಿದ್ದಾರೆ. ನಂತರ ಹೊಂಬಾಳೆ ಗೌಡ ಹಾಗೂ ಮಂಗಳಮ್ಮಗೆ ಟೇಪ್ ಸುತ್ತಿ ಕೂರಿಸಿದ್ದಾರೆ. ಬಳಿಕ ಬೆಡ್ರೂಮ್ ಜಾಲಾಡಿ ಸುಮಾರು 20 ಲಕ್ಷ ರೂ. ಹಾಗೂ ಅರ್ಧ ಕೆಜಿ ಚಿನ್ನಾಭರಣ ದೋಚಿದ್ದಾರೆ.
ಇದೇ ವೇಳೆ ಆರೋಪಿಗಳ ಕೃತ್ಯಕ್ಕೆ ಬೆದರಿ ಹೊಂಬಾಳೆಗೌಡರು ಹಣ, ಒಡವೆ ಕೊಟ್ಟಿದ್ದಾರೆ. ಕೊನೆಗೆ ಪತ್ನಿ ಮಾಂಗಲ್ಯ ಬೇಕಾದ್ರೂ ತಗೊಳಿ ಎಂದಿದ್ದಕ್ಕೆ ಆರೋಪಿಗಳು ಬೇಡ ಎಂದು ಬಿಟ್ಟು ಹೋಗಿದ್ದಾರೆ.
ಪರಾರಿಯಾಗುವ ಇಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದಾರೆ. ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳಚಿಕೊಂಡು ಹೋಗಿದ್ದಾರೆ.
ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…