ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ (ಫೆ.16) ಮಧ್ಯಾಹ್ನ ಬಿಇಎಲ್ ಬಡಾವಣೆಯ ಹೊಂಬಾಳೆಗೌಡರ ಮನೆಯಲ್ಲಿ ದರೋಡೆ ನಡೆದಿದೆ.
ಘಟನೆ ವೇಳೆ ಹೊಂಬಾಳೆಗೌಡ (53), ಪತ್ನಿ ಮಂಗಳಮ್ಮ ಮತ್ತು ಎರಡೂವರೆ ವರ್ಷದ ಮೊಮ್ಮಗು ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ಖಾಸಗಿ ಕಾರಿನಲ್ಲಿ ಯಲಹಂಕ ಪೊಲೀಸರು ಎಂದು ಹೇಳಿ ಸಬ್ ಇನ್ಸ್ಪೆಕ್ಟರ್ ಯೂನಿಫಾರ್ಮ್ ಧರಿಸಿ ಕೈಯಲ್ಲಿ ಡೈರಿ ಹಿಡಿದು ಒಬ್ಬ ಎಂಟ್ರಿ ಕೊಟ್ಟಿದ್ದು, ಹಿಂದೆ ಕ್ರೈಮ್ ಪಿಸಿ ರೀತಿ ಬ್ಯಾಗ್ ಹಾಕಿಕೊಂಡು ಮತ್ತೊಬ್ಬ ಎಂಟ್ರಿ ಕೊಟ್ಟಿದ್ದಾನೆ.
ಮೊದಲು ಮನೆಗೆ ನುಗ್ಗಿ ಗನ್ ಮತ್ತು ಚಾಕು ತೋರಿಸಿ, ಮನೆ ಮಾಲೀಕರನ್ನ ಲಾಕ್ ಮಾಡಿದ್ದಾರೆ. ನಂತರ ಹೊಂಬಾಳೆ ಗೌಡ ಹಾಗೂ ಮಂಗಳಮ್ಮಗೆ ಟೇಪ್ ಸುತ್ತಿ ಕೂರಿಸಿದ್ದಾರೆ. ಬಳಿಕ ಬೆಡ್ರೂಮ್ ಜಾಲಾಡಿ ಸುಮಾರು 20 ಲಕ್ಷ ರೂ. ಹಾಗೂ ಅರ್ಧ ಕೆಜಿ ಚಿನ್ನಾಭರಣ ದೋಚಿದ್ದಾರೆ.
ಇದೇ ವೇಳೆ ಆರೋಪಿಗಳ ಕೃತ್ಯಕ್ಕೆ ಬೆದರಿ ಹೊಂಬಾಳೆಗೌಡರು ಹಣ, ಒಡವೆ ಕೊಟ್ಟಿದ್ದಾರೆ. ಕೊನೆಗೆ ಪತ್ನಿ ಮಾಂಗಲ್ಯ ಬೇಕಾದ್ರೂ ತಗೊಳಿ ಎಂದಿದ್ದಕ್ಕೆ ಆರೋಪಿಗಳು ಬೇಡ ಎಂದು ಬಿಟ್ಟು ಹೋಗಿದ್ದಾರೆ.
ಪರಾರಿಯಾಗುವ ಇಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದಾರೆ. ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳಚಿಕೊಂಡು ಹೋಗಿದ್ದಾರೆ.
ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…