ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಳ-ಸಿಎಂ ಸಿದ್ದರಾಮಯ್ಯ

ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು ಎಂದು ಹೇಳಿದರು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.
ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದು ಹೇಳಿದರು.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

4 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

14 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

15 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago