ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.
ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದು ಹೇಳಿದರು.
ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…