ಪೋಕ್ಸೋ ಪ್ರಕರಣದಲ್ಲಿ ಬಂಧನದ ಭಯ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ವೈಗೆ ಹೈಕೋರ್ಟ್ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡಿದೆ. ಇಂದು ಯಡಿಯೂರಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಬಿಎಸ್ವೈಗೆ ಜಾಮೀನು ನೀಡಿದೆ.
ಇದಲ್ಲದೇ ಮಾಜಿ ಸಿಎಂ ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅದೇರೀತಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಹೈಕೋರ್ಟ್ ನ್ಯಾಯಪೀಠ ತಾಕೀತು ಕೂಡ ಮಾಡಿದೆ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿಯೇ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ನಿನ್ನೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಬಿಎಸ್ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ನಿನ್ನೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…