ಪೋಡಿ ಮಾಡಿಸದೆ ಸರ್ಕಾರಿ ಭೂಮಿಯಲ್ಲಿ ಕಾಂಪೌಂಡ್ ನಿರ್ಮಾಣ: ರೈತರ ಆಕ್ರೋಶ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್:

ದೊಡ್ಡಬಳ್ಳಾಪುರ : ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ ಎಂದು ತಿಳಿದುಬಂದಿದೆ. ಬಲಾಢ್ಯರೊಬ್ಬರು ಪೋಡಿ ಮಾಡಸದೇ ಸರ್ಕಾರಿ ಗೋಮಾಳದಲ್ಲಿಯೂ ಸಹ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಈ ಕುರಿತು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲಾಢ್ಯರ ಅತಿಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಾಂಪೌಂಡ್ ನಿರ್ಮಾಣವನ್ನ ತಡೆ ಹಿಡಿದಿದದು, ಪೋಡಿ ನಂತರ ಅನಧಿಕೃತ ಸಾಗುವಳಿದಾರನ್ನು ತೆರವು ಮಾಡಿ ಸರ್ಕಾರಿ ಜಾಗವನ್ನ ವಶಕ್ಕೆ ಪಡೆಯುವುದಾಗಿ ಹೇಳಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲೇಗೌಡನಪಾಳ್ಯ, ಲಕ್ಕೇನಹಳ್ಳಿ, ಸಿಂಗೇಹಳ್ಳಿ ಸರ್ವೆ ನಂಬರ್ ಗಳಲ್ಲಿ ಸುಮಾರು 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ರೈತರು ನೂರಾರು ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿದ್ದು, ಸಾಗುವಳಿ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ಫಾರಂ 53, 57 ಅರ್ಜಿಯನ್ನು ಸಲ್ಲಿಸಿದ್ದಾರೆ, ಕೆಲವು ರೈತರಿಗೆ ಭೂ ಮಂಜೂರಾತಿಯಾಗಿದೆ. ಬಲಾಢ್ಯನೊಬ್ಬ ಸರ್ಕಾರಿ ಗೋಮಾಳದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸರ್ಕಾರಿ ಗೋಮಾಳ ಹತ್ತಾರು ಗ್ರಾಮಗಳಲ್ಲಿನ ಜಾನುವಾರುಗಳ ಮೇವಿನ ತಾಣ, ಪಶುಸಂಗೋಪನೆ ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಮಾಡುತ್ತಿವೆ, ಇದೇ ಗೋಮಾಳದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದ್ದು, ಜಾನುವಾರುಗಳ ಪ್ರವೇಶಿಸದಂತೆ ತಡೆಯುಲಾಗುತ್ತಿದೆ ಎಂಬುದು ರೈತರ ಆರೋಪವಾಗಿದೆ‌. ಕಾಂಪೌಂಡ್ ನಿರ್ಮಾಣಕ್ಕೆ ತಡೆ ಹಾಕುವಂತೆ ತಹಶೀಲ್ದಾರ್ ರವರಿಗೆ ಮನವಿ ಮಾಡಿದರು.

ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಸರ್ವೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ರೈತರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ ಕಾಂಪೌಂಡ್ ನಿರ್ಮಾಣಕ್ಕೆ ತಡೆ ನೀಡಲಾಗಿದೆ, ಪೋಡಿಯಾಗುವ ವರೆಗೂ ಕಾಂಪೌಂಡ್ ನಿರ್ಮಾಣ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಹಲವು ವರ್ಷಗಳಿಂದ ಸಾಗುವಳಿ ರೈತರು ಮತ್ತು ರೈತರಿಂದ ಭೂಮಿ ಖರೀದಿ ಮಾಡಿರುವ ಖಾಸಗಿ ಫೌರ್ಮ್ ನವರಿದ್ದಾರೆ, ಇವರಿಬ್ಬರ ನಡುವಿನ ಗೊಂದಲದಿಂದ ಸಮಸ್ಯೆಯುಂಟಾಗಿದೆ, ಕ್ರಯ ಮಾಡಿಕೊಂಡಿರುವ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕೂ ಮುನ್ನ, ಅಧಿಕಾರಿಗಳ ತಂಡ ಸರ್ವೆ ನಡೆಸಿ ಪೋಡಿಯಾದ ನಂತರವೇ ಕಾಂಪೌಂಡ್ ನಿರ್ಮಾಣ ಮಾಡಲಿ ಎಂದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೋಡಿ ಅಂದೋಲನದಲ್ಲಿ ಸಾಸಲು ಹೋಬಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಸಂಪೂರ್ಣ ಹೋಬಳಿಯನ್ನ ಪೋಡಿ ಮುಕ್ತ ಮಾಡಲಾಗುವುದು. ಕಾಂಪೌಂಡ್ ನಿರ್ಮಾಣ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಉಪ ತಹಶೀಲ್ದಾರ್ ನೇತೃತ್ವದಲ್ಲಿ 6 ಸರ್ವೆಯರ್ಸ್, ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೇಕ್ಟರ್, ಮತ್ತು ಪೊಲೀಸು ಒಳಗೊಂಡ ತಂಡ ರಚನೆ ಮಾಡಲಾಗಿದೆ‌ ಎಂದರು.

ಅಧಿಕಾರಿಗಳ ತಂಡ ಮೂರು ಗ್ರಾಮಗಳ ಸಂಪೂರ್ಣ ಸರ್ವೆ ಮಾಡುವರು, ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿರುವ, ಖಾತೆ ಮಾಡಿಸಿಕೊಂಡಿರುವ, ಮಾರಾಟ ಮಾಡಿರುವ ಮತ್ತು ಅನಧಿಕೃತವಾಗಿರುವ ರೈತರ ಬಗ್ಗೆ ಮಾಹಿತಿ ಕಲೆ ಹಾಕಿ 15 ದಿನದೊಳಗೆ ವರದಿ ಸಲ್ಲಿಸುವರು. ವರದಿ ಆಧಾರದ ಮೇಲೆ ಅನಧಿಕೃತವಾಗಿರುವರನ್ನ ತೆರವು ಮಾಡಲಾಗುವುದು, ಸರ್ಕಾರಿ ಗೋಮಾಳವನ್ನ ಸರ್ಕಾರದ ವಶಕ್ಕೆ ಪಡೆಯುವುದ್ದಾಗಿ ಹೇಳಿದರು.

ಸಾಗುವಳಿದಾರರಾದ ರಾಮಕ್ಕ ಮಾತನಾಡಿ, ನಮ್ಮ ಅತ್ತೆ ಮಾವನ ಕಾಲದಿಂದ ನಾವು ಈ ಜಾಗದಲ್ಲಿ ವ್ಯವ್ಯಸಾಯ ಮಾಡುತ್ತಿದ್ದೇವೆ, ಉಪ ವಿಭಾಗಾಧಿಕಾರಿಗಳಿಂದ ಆದೇಶವಾಗಿದೆ, ಜಮೀನಿನ ಸ್ಕೇಚ್ ಆಗಿದೆ, ನಮ್ಮ ಬಳಿ ಜಮೀನಿನ ದಾಖಲೆಗಳಿದ್ದರು ದೌರ್ಜನ್ಯದಿಂದ ನಮ್ಮನ್ನು ಇಲ್ಲಿಂದ ಓಡಿಸಲು ಯತ್ನಿಸುತ್ತಿದ್ದಾರೆ, ತಹಶೀಲ್ದಾರ್ ಮಾತಿನ ಮೇಲೆ ನಂಬಿಕೆ ಇದೆ, ನ್ಯಾಯ ಸಿಗುವ ಭರವಸೆ ಇದೆ ಎಂದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

9 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

14 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

14 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

22 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago