ಪೋಡಿ ಮಾಡಿಸದೆ ಸರ್ಕಾರಿ ಭೂಮಿಯಲ್ಲಿ ಕಾಂಪೌಂಡ್ ನಿರ್ಮಾಣ: ರೈತರ ಆಕ್ರೋಶ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್:

ದೊಡ್ಡಬಳ್ಳಾಪುರ : ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ ಎಂದು ತಿಳಿದುಬಂದಿದೆ. ಬಲಾಢ್ಯರೊಬ್ಬರು ಪೋಡಿ ಮಾಡಸದೇ ಸರ್ಕಾರಿ ಗೋಮಾಳದಲ್ಲಿಯೂ ಸಹ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಈ ಕುರಿತು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲಾಢ್ಯರ ಅತಿಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಾಂಪೌಂಡ್ ನಿರ್ಮಾಣವನ್ನ ತಡೆ ಹಿಡಿದಿದದು, ಪೋಡಿ ನಂತರ ಅನಧಿಕೃತ ಸಾಗುವಳಿದಾರನ್ನು ತೆರವು ಮಾಡಿ ಸರ್ಕಾರಿ ಜಾಗವನ್ನ ವಶಕ್ಕೆ ಪಡೆಯುವುದಾಗಿ ಹೇಳಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲೇಗೌಡನಪಾಳ್ಯ, ಲಕ್ಕೇನಹಳ್ಳಿ, ಸಿಂಗೇಹಳ್ಳಿ ಸರ್ವೆ ನಂಬರ್ ಗಳಲ್ಲಿ ಸುಮಾರು 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ರೈತರು ನೂರಾರು ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿದ್ದು, ಸಾಗುವಳಿ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ಫಾರಂ 53, 57 ಅರ್ಜಿಯನ್ನು ಸಲ್ಲಿಸಿದ್ದಾರೆ, ಕೆಲವು ರೈತರಿಗೆ ಭೂ ಮಂಜೂರಾತಿಯಾಗಿದೆ. ಬಲಾಢ್ಯನೊಬ್ಬ ಸರ್ಕಾರಿ ಗೋಮಾಳದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸರ್ಕಾರಿ ಗೋಮಾಳ ಹತ್ತಾರು ಗ್ರಾಮಗಳಲ್ಲಿನ ಜಾನುವಾರುಗಳ ಮೇವಿನ ತಾಣ, ಪಶುಸಂಗೋಪನೆ ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಮಾಡುತ್ತಿವೆ, ಇದೇ ಗೋಮಾಳದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದ್ದು, ಜಾನುವಾರುಗಳ ಪ್ರವೇಶಿಸದಂತೆ ತಡೆಯುಲಾಗುತ್ತಿದೆ ಎಂಬುದು ರೈತರ ಆರೋಪವಾಗಿದೆ‌. ಕಾಂಪೌಂಡ್ ನಿರ್ಮಾಣಕ್ಕೆ ತಡೆ ಹಾಕುವಂತೆ ತಹಶೀಲ್ದಾರ್ ರವರಿಗೆ ಮನವಿ ಮಾಡಿದರು.

ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಸರ್ವೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ರೈತರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ ಕಾಂಪೌಂಡ್ ನಿರ್ಮಾಣಕ್ಕೆ ತಡೆ ನೀಡಲಾಗಿದೆ, ಪೋಡಿಯಾಗುವ ವರೆಗೂ ಕಾಂಪೌಂಡ್ ನಿರ್ಮಾಣ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಹಲವು ವರ್ಷಗಳಿಂದ ಸಾಗುವಳಿ ರೈತರು ಮತ್ತು ರೈತರಿಂದ ಭೂಮಿ ಖರೀದಿ ಮಾಡಿರುವ ಖಾಸಗಿ ಫೌರ್ಮ್ ನವರಿದ್ದಾರೆ, ಇವರಿಬ್ಬರ ನಡುವಿನ ಗೊಂದಲದಿಂದ ಸಮಸ್ಯೆಯುಂಟಾಗಿದೆ, ಕ್ರಯ ಮಾಡಿಕೊಂಡಿರುವ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕೂ ಮುನ್ನ, ಅಧಿಕಾರಿಗಳ ತಂಡ ಸರ್ವೆ ನಡೆಸಿ ಪೋಡಿಯಾದ ನಂತರವೇ ಕಾಂಪೌಂಡ್ ನಿರ್ಮಾಣ ಮಾಡಲಿ ಎಂದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೋಡಿ ಅಂದೋಲನದಲ್ಲಿ ಸಾಸಲು ಹೋಬಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಸಂಪೂರ್ಣ ಹೋಬಳಿಯನ್ನ ಪೋಡಿ ಮುಕ್ತ ಮಾಡಲಾಗುವುದು. ಕಾಂಪೌಂಡ್ ನಿರ್ಮಾಣ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಉಪ ತಹಶೀಲ್ದಾರ್ ನೇತೃತ್ವದಲ್ಲಿ 6 ಸರ್ವೆಯರ್ಸ್, ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೇಕ್ಟರ್, ಮತ್ತು ಪೊಲೀಸು ಒಳಗೊಂಡ ತಂಡ ರಚನೆ ಮಾಡಲಾಗಿದೆ‌ ಎಂದರು.

ಅಧಿಕಾರಿಗಳ ತಂಡ ಮೂರು ಗ್ರಾಮಗಳ ಸಂಪೂರ್ಣ ಸರ್ವೆ ಮಾಡುವರು, ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿರುವ, ಖಾತೆ ಮಾಡಿಸಿಕೊಂಡಿರುವ, ಮಾರಾಟ ಮಾಡಿರುವ ಮತ್ತು ಅನಧಿಕೃತವಾಗಿರುವ ರೈತರ ಬಗ್ಗೆ ಮಾಹಿತಿ ಕಲೆ ಹಾಕಿ 15 ದಿನದೊಳಗೆ ವರದಿ ಸಲ್ಲಿಸುವರು. ವರದಿ ಆಧಾರದ ಮೇಲೆ ಅನಧಿಕೃತವಾಗಿರುವರನ್ನ ತೆರವು ಮಾಡಲಾಗುವುದು, ಸರ್ಕಾರಿ ಗೋಮಾಳವನ್ನ ಸರ್ಕಾರದ ವಶಕ್ಕೆ ಪಡೆಯುವುದ್ದಾಗಿ ಹೇಳಿದರು.

ಸಾಗುವಳಿದಾರರಾದ ರಾಮಕ್ಕ ಮಾತನಾಡಿ, ನಮ್ಮ ಅತ್ತೆ ಮಾವನ ಕಾಲದಿಂದ ನಾವು ಈ ಜಾಗದಲ್ಲಿ ವ್ಯವ್ಯಸಾಯ ಮಾಡುತ್ತಿದ್ದೇವೆ, ಉಪ ವಿಭಾಗಾಧಿಕಾರಿಗಳಿಂದ ಆದೇಶವಾಗಿದೆ, ಜಮೀನಿನ ಸ್ಕೇಚ್ ಆಗಿದೆ, ನಮ್ಮ ಬಳಿ ಜಮೀನಿನ ದಾಖಲೆಗಳಿದ್ದರು ದೌರ್ಜನ್ಯದಿಂದ ನಮ್ಮನ್ನು ಇಲ್ಲಿಂದ ಓಡಿಸಲು ಯತ್ನಿಸುತ್ತಿದ್ದಾರೆ, ತಹಶೀಲ್ದಾರ್ ಮಾತಿನ ಮೇಲೆ ನಂಬಿಕೆ ಇದೆ, ನ್ಯಾಯ ಸಿಗುವ ಭರವಸೆ ಇದೆ ಎಂದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago