ಪೋಡಿ ಮಾಡಿಸದೆ ಸರ್ಕಾರಿ ಭೂಮಿಯಲ್ಲಿ ಕಾಂಪೌಂಡ್ ನಿರ್ಮಾಣ: ರೈತರ ಆಕ್ರೋಶ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್:

ದೊಡ್ಡಬಳ್ಳಾಪುರ : ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ ಎಂದು ತಿಳಿದುಬಂದಿದೆ. ಬಲಾಢ್ಯರೊಬ್ಬರು ಪೋಡಿ ಮಾಡಸದೇ ಸರ್ಕಾರಿ ಗೋಮಾಳದಲ್ಲಿಯೂ ಸಹ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಈ ಕುರಿತು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲಾಢ್ಯರ ಅತಿಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಾಂಪೌಂಡ್ ನಿರ್ಮಾಣವನ್ನ ತಡೆ ಹಿಡಿದಿದದು, ಪೋಡಿ ನಂತರ ಅನಧಿಕೃತ ಸಾಗುವಳಿದಾರನ್ನು ತೆರವು ಮಾಡಿ ಸರ್ಕಾರಿ ಜಾಗವನ್ನ ವಶಕ್ಕೆ ಪಡೆಯುವುದಾಗಿ ಹೇಳಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲೇಗೌಡನಪಾಳ್ಯ, ಲಕ್ಕೇನಹಳ್ಳಿ, ಸಿಂಗೇಹಳ್ಳಿ ಸರ್ವೆ ನಂಬರ್ ಗಳಲ್ಲಿ ಸುಮಾರು 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ರೈತರು ನೂರಾರು ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿದ್ದು, ಸಾಗುವಳಿ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ಫಾರಂ 53, 57 ಅರ್ಜಿಯನ್ನು ಸಲ್ಲಿಸಿದ್ದಾರೆ, ಕೆಲವು ರೈತರಿಗೆ ಭೂ ಮಂಜೂರಾತಿಯಾಗಿದೆ. ಬಲಾಢ್ಯನೊಬ್ಬ ಸರ್ಕಾರಿ ಗೋಮಾಳದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸರ್ಕಾರಿ ಗೋಮಾಳ ಹತ್ತಾರು ಗ್ರಾಮಗಳಲ್ಲಿನ ಜಾನುವಾರುಗಳ ಮೇವಿನ ತಾಣ, ಪಶುಸಂಗೋಪನೆ ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಮಾಡುತ್ತಿವೆ, ಇದೇ ಗೋಮಾಳದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದ್ದು, ಜಾನುವಾರುಗಳ ಪ್ರವೇಶಿಸದಂತೆ ತಡೆಯುಲಾಗುತ್ತಿದೆ ಎಂಬುದು ರೈತರ ಆರೋಪವಾಗಿದೆ‌. ಕಾಂಪೌಂಡ್ ನಿರ್ಮಾಣಕ್ಕೆ ತಡೆ ಹಾಕುವಂತೆ ತಹಶೀಲ್ದಾರ್ ರವರಿಗೆ ಮನವಿ ಮಾಡಿದರು.

ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಸರ್ವೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ರೈತರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ ಕಾಂಪೌಂಡ್ ನಿರ್ಮಾಣಕ್ಕೆ ತಡೆ ನೀಡಲಾಗಿದೆ, ಪೋಡಿಯಾಗುವ ವರೆಗೂ ಕಾಂಪೌಂಡ್ ನಿರ್ಮಾಣ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಹಲವು ವರ್ಷಗಳಿಂದ ಸಾಗುವಳಿ ರೈತರು ಮತ್ತು ರೈತರಿಂದ ಭೂಮಿ ಖರೀದಿ ಮಾಡಿರುವ ಖಾಸಗಿ ಫೌರ್ಮ್ ನವರಿದ್ದಾರೆ, ಇವರಿಬ್ಬರ ನಡುವಿನ ಗೊಂದಲದಿಂದ ಸಮಸ್ಯೆಯುಂಟಾಗಿದೆ, ಕ್ರಯ ಮಾಡಿಕೊಂಡಿರುವ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕೂ ಮುನ್ನ, ಅಧಿಕಾರಿಗಳ ತಂಡ ಸರ್ವೆ ನಡೆಸಿ ಪೋಡಿಯಾದ ನಂತರವೇ ಕಾಂಪೌಂಡ್ ನಿರ್ಮಾಣ ಮಾಡಲಿ ಎಂದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೋಡಿ ಅಂದೋಲನದಲ್ಲಿ ಸಾಸಲು ಹೋಬಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಸಂಪೂರ್ಣ ಹೋಬಳಿಯನ್ನ ಪೋಡಿ ಮುಕ್ತ ಮಾಡಲಾಗುವುದು. ಕಾಂಪೌಂಡ್ ನಿರ್ಮಾಣ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಉಪ ತಹಶೀಲ್ದಾರ್ ನೇತೃತ್ವದಲ್ಲಿ 6 ಸರ್ವೆಯರ್ಸ್, ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೇಕ್ಟರ್, ಮತ್ತು ಪೊಲೀಸು ಒಳಗೊಂಡ ತಂಡ ರಚನೆ ಮಾಡಲಾಗಿದೆ‌ ಎಂದರು.

ಅಧಿಕಾರಿಗಳ ತಂಡ ಮೂರು ಗ್ರಾಮಗಳ ಸಂಪೂರ್ಣ ಸರ್ವೆ ಮಾಡುವರು, ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿರುವ, ಖಾತೆ ಮಾಡಿಸಿಕೊಂಡಿರುವ, ಮಾರಾಟ ಮಾಡಿರುವ ಮತ್ತು ಅನಧಿಕೃತವಾಗಿರುವ ರೈತರ ಬಗ್ಗೆ ಮಾಹಿತಿ ಕಲೆ ಹಾಕಿ 15 ದಿನದೊಳಗೆ ವರದಿ ಸಲ್ಲಿಸುವರು. ವರದಿ ಆಧಾರದ ಮೇಲೆ ಅನಧಿಕೃತವಾಗಿರುವರನ್ನ ತೆರವು ಮಾಡಲಾಗುವುದು, ಸರ್ಕಾರಿ ಗೋಮಾಳವನ್ನ ಸರ್ಕಾರದ ವಶಕ್ಕೆ ಪಡೆಯುವುದ್ದಾಗಿ ಹೇಳಿದರು.

ಸಾಗುವಳಿದಾರರಾದ ರಾಮಕ್ಕ ಮಾತನಾಡಿ, ನಮ್ಮ ಅತ್ತೆ ಮಾವನ ಕಾಲದಿಂದ ನಾವು ಈ ಜಾಗದಲ್ಲಿ ವ್ಯವ್ಯಸಾಯ ಮಾಡುತ್ತಿದ್ದೇವೆ, ಉಪ ವಿಭಾಗಾಧಿಕಾರಿಗಳಿಂದ ಆದೇಶವಾಗಿದೆ, ಜಮೀನಿನ ಸ್ಕೇಚ್ ಆಗಿದೆ, ನಮ್ಮ ಬಳಿ ಜಮೀನಿನ ದಾಖಲೆಗಳಿದ್ದರು ದೌರ್ಜನ್ಯದಿಂದ ನಮ್ಮನ್ನು ಇಲ್ಲಿಂದ ಓಡಿಸಲು ಯತ್ನಿಸುತ್ತಿದ್ದಾರೆ, ತಹಶೀಲ್ದಾರ್ ಮಾತಿನ ಮೇಲೆ ನಂಬಿಕೆ ಇದೆ, ನ್ಯಾಯ ಸಿಗುವ ಭರವಸೆ ಇದೆ ಎಂದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago