ಪೋಡಿ ಮಾಡಿಸದೆ ಸರ್ಕಾರಿ ಭೂಮಿಯಲ್ಲಿ ಕಾಂಪೌಂಡ್ ನಿರ್ಮಾಣ: ರೈತರ ಆಕ್ರೋಶ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್:

ದೊಡ್ಡಬಳ್ಳಾಪುರ : ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ ಎಂದು ತಿಳಿದುಬಂದಿದೆ. ಬಲಾಢ್ಯರೊಬ್ಬರು ಪೋಡಿ ಮಾಡಸದೇ ಸರ್ಕಾರಿ ಗೋಮಾಳದಲ್ಲಿಯೂ ಸಹ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಈ ಕುರಿತು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲಾಢ್ಯರ ಅತಿಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಾಂಪೌಂಡ್ ನಿರ್ಮಾಣವನ್ನ ತಡೆ ಹಿಡಿದಿದದು, ಪೋಡಿ ನಂತರ ಅನಧಿಕೃತ ಸಾಗುವಳಿದಾರನ್ನು ತೆರವು ಮಾಡಿ ಸರ್ಕಾರಿ ಜಾಗವನ್ನ ವಶಕ್ಕೆ ಪಡೆಯುವುದಾಗಿ ಹೇಳಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲೇಗೌಡನಪಾಳ್ಯ, ಲಕ್ಕೇನಹಳ್ಳಿ, ಸಿಂಗೇಹಳ್ಳಿ ಸರ್ವೆ ನಂಬರ್ ಗಳಲ್ಲಿ ಸುಮಾರು 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ರೈತರು ನೂರಾರು ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿದ್ದು, ಸಾಗುವಳಿ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ಫಾರಂ 53, 57 ಅರ್ಜಿಯನ್ನು ಸಲ್ಲಿಸಿದ್ದಾರೆ, ಕೆಲವು ರೈತರಿಗೆ ಭೂ ಮಂಜೂರಾತಿಯಾಗಿದೆ. ಬಲಾಢ್ಯನೊಬ್ಬ ಸರ್ಕಾರಿ ಗೋಮಾಳದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸರ್ಕಾರಿ ಗೋಮಾಳ ಹತ್ತಾರು ಗ್ರಾಮಗಳಲ್ಲಿನ ಜಾನುವಾರುಗಳ ಮೇವಿನ ತಾಣ, ಪಶುಸಂಗೋಪನೆ ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಮಾಡುತ್ತಿವೆ, ಇದೇ ಗೋಮಾಳದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದ್ದು, ಜಾನುವಾರುಗಳ ಪ್ರವೇಶಿಸದಂತೆ ತಡೆಯುಲಾಗುತ್ತಿದೆ ಎಂಬುದು ರೈತರ ಆರೋಪವಾಗಿದೆ‌. ಕಾಂಪೌಂಡ್ ನಿರ್ಮಾಣಕ್ಕೆ ತಡೆ ಹಾಕುವಂತೆ ತಹಶೀಲ್ದಾರ್ ರವರಿಗೆ ಮನವಿ ಮಾಡಿದರು.

ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಸರ್ವೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ರೈತರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ ಕಾಂಪೌಂಡ್ ನಿರ್ಮಾಣಕ್ಕೆ ತಡೆ ನೀಡಲಾಗಿದೆ, ಪೋಡಿಯಾಗುವ ವರೆಗೂ ಕಾಂಪೌಂಡ್ ನಿರ್ಮಾಣ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಹಲವು ವರ್ಷಗಳಿಂದ ಸಾಗುವಳಿ ರೈತರು ಮತ್ತು ರೈತರಿಂದ ಭೂಮಿ ಖರೀದಿ ಮಾಡಿರುವ ಖಾಸಗಿ ಫೌರ್ಮ್ ನವರಿದ್ದಾರೆ, ಇವರಿಬ್ಬರ ನಡುವಿನ ಗೊಂದಲದಿಂದ ಸಮಸ್ಯೆಯುಂಟಾಗಿದೆ, ಕ್ರಯ ಮಾಡಿಕೊಂಡಿರುವ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕೂ ಮುನ್ನ, ಅಧಿಕಾರಿಗಳ ತಂಡ ಸರ್ವೆ ನಡೆಸಿ ಪೋಡಿಯಾದ ನಂತರವೇ ಕಾಂಪೌಂಡ್ ನಿರ್ಮಾಣ ಮಾಡಲಿ ಎಂದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೋಡಿ ಅಂದೋಲನದಲ್ಲಿ ಸಾಸಲು ಹೋಬಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಸಂಪೂರ್ಣ ಹೋಬಳಿಯನ್ನ ಪೋಡಿ ಮುಕ್ತ ಮಾಡಲಾಗುವುದು. ಕಾಂಪೌಂಡ್ ನಿರ್ಮಾಣ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಉಪ ತಹಶೀಲ್ದಾರ್ ನೇತೃತ್ವದಲ್ಲಿ 6 ಸರ್ವೆಯರ್ಸ್, ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೇಕ್ಟರ್, ಮತ್ತು ಪೊಲೀಸು ಒಳಗೊಂಡ ತಂಡ ರಚನೆ ಮಾಡಲಾಗಿದೆ‌ ಎಂದರು.

ಅಧಿಕಾರಿಗಳ ತಂಡ ಮೂರು ಗ್ರಾಮಗಳ ಸಂಪೂರ್ಣ ಸರ್ವೆ ಮಾಡುವರು, ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿರುವ, ಖಾತೆ ಮಾಡಿಸಿಕೊಂಡಿರುವ, ಮಾರಾಟ ಮಾಡಿರುವ ಮತ್ತು ಅನಧಿಕೃತವಾಗಿರುವ ರೈತರ ಬಗ್ಗೆ ಮಾಹಿತಿ ಕಲೆ ಹಾಕಿ 15 ದಿನದೊಳಗೆ ವರದಿ ಸಲ್ಲಿಸುವರು. ವರದಿ ಆಧಾರದ ಮೇಲೆ ಅನಧಿಕೃತವಾಗಿರುವರನ್ನ ತೆರವು ಮಾಡಲಾಗುವುದು, ಸರ್ಕಾರಿ ಗೋಮಾಳವನ್ನ ಸರ್ಕಾರದ ವಶಕ್ಕೆ ಪಡೆಯುವುದ್ದಾಗಿ ಹೇಳಿದರು.

ಸಾಗುವಳಿದಾರರಾದ ರಾಮಕ್ಕ ಮಾತನಾಡಿ, ನಮ್ಮ ಅತ್ತೆ ಮಾವನ ಕಾಲದಿಂದ ನಾವು ಈ ಜಾಗದಲ್ಲಿ ವ್ಯವ್ಯಸಾಯ ಮಾಡುತ್ತಿದ್ದೇವೆ, ಉಪ ವಿಭಾಗಾಧಿಕಾರಿಗಳಿಂದ ಆದೇಶವಾಗಿದೆ, ಜಮೀನಿನ ಸ್ಕೇಚ್ ಆಗಿದೆ, ನಮ್ಮ ಬಳಿ ಜಮೀನಿನ ದಾಖಲೆಗಳಿದ್ದರು ದೌರ್ಜನ್ಯದಿಂದ ನಮ್ಮನ್ನು ಇಲ್ಲಿಂದ ಓಡಿಸಲು ಯತ್ನಿಸುತ್ತಿದ್ದಾರೆ, ತಹಶೀಲ್ದಾರ್ ಮಾತಿನ ಮೇಲೆ ನಂಬಿಕೆ ಇದೆ, ನ್ಯಾಯ ಸಿಗುವ ಭರವಸೆ ಇದೆ ಎಂದರು.

Ramesh Babu

Journalist

Recent Posts

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

17 minutes ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

1 hour ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

6 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

12 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago