ಪೋಡಿ ಮಾಡಿಸದೆ ಸರ್ಕಾರಿ ಭೂಮಿಯಲ್ಲಿ ಕಾಂಪೌಂಡ್ ನಿರ್ಮಾಣ: ರೈತರ ಆಕ್ರೋಶ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್:

ದೊಡ್ಡಬಳ್ಳಾಪುರ : ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ ಎಂದು ತಿಳಿದುಬಂದಿದೆ. ಬಲಾಢ್ಯರೊಬ್ಬರು ಪೋಡಿ ಮಾಡಸದೇ ಸರ್ಕಾರಿ ಗೋಮಾಳದಲ್ಲಿಯೂ ಸಹ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಈ ಕುರಿತು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲಾಢ್ಯರ ಅತಿಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಾಂಪೌಂಡ್ ನಿರ್ಮಾಣವನ್ನ ತಡೆ ಹಿಡಿದಿದದು, ಪೋಡಿ ನಂತರ ಅನಧಿಕೃತ ಸಾಗುವಳಿದಾರನ್ನು ತೆರವು ಮಾಡಿ ಸರ್ಕಾರಿ ಜಾಗವನ್ನ ವಶಕ್ಕೆ ಪಡೆಯುವುದಾಗಿ ಹೇಳಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲೇಗೌಡನಪಾಳ್ಯ, ಲಕ್ಕೇನಹಳ್ಳಿ, ಸಿಂಗೇಹಳ್ಳಿ ಸರ್ವೆ ನಂಬರ್ ಗಳಲ್ಲಿ ಸುಮಾರು 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ರೈತರು ನೂರಾರು ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿದ್ದು, ಸಾಗುವಳಿ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ಫಾರಂ 53, 57 ಅರ್ಜಿಯನ್ನು ಸಲ್ಲಿಸಿದ್ದಾರೆ, ಕೆಲವು ರೈತರಿಗೆ ಭೂ ಮಂಜೂರಾತಿಯಾಗಿದೆ. ಬಲಾಢ್ಯನೊಬ್ಬ ಸರ್ಕಾರಿ ಗೋಮಾಳದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸರ್ಕಾರಿ ಗೋಮಾಳ ಹತ್ತಾರು ಗ್ರಾಮಗಳಲ್ಲಿನ ಜಾನುವಾರುಗಳ ಮೇವಿನ ತಾಣ, ಪಶುಸಂಗೋಪನೆ ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಮಾಡುತ್ತಿವೆ, ಇದೇ ಗೋಮಾಳದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದ್ದು, ಜಾನುವಾರುಗಳ ಪ್ರವೇಶಿಸದಂತೆ ತಡೆಯುಲಾಗುತ್ತಿದೆ ಎಂಬುದು ರೈತರ ಆರೋಪವಾಗಿದೆ‌. ಕಾಂಪೌಂಡ್ ನಿರ್ಮಾಣಕ್ಕೆ ತಡೆ ಹಾಕುವಂತೆ ತಹಶೀಲ್ದಾರ್ ರವರಿಗೆ ಮನವಿ ಮಾಡಿದರು.

ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಸರ್ವೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ರೈತರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ ಕಾಂಪೌಂಡ್ ನಿರ್ಮಾಣಕ್ಕೆ ತಡೆ ನೀಡಲಾಗಿದೆ, ಪೋಡಿಯಾಗುವ ವರೆಗೂ ಕಾಂಪೌಂಡ್ ನಿರ್ಮಾಣ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಹಲವು ವರ್ಷಗಳಿಂದ ಸಾಗುವಳಿ ರೈತರು ಮತ್ತು ರೈತರಿಂದ ಭೂಮಿ ಖರೀದಿ ಮಾಡಿರುವ ಖಾಸಗಿ ಫೌರ್ಮ್ ನವರಿದ್ದಾರೆ, ಇವರಿಬ್ಬರ ನಡುವಿನ ಗೊಂದಲದಿಂದ ಸಮಸ್ಯೆಯುಂಟಾಗಿದೆ, ಕ್ರಯ ಮಾಡಿಕೊಂಡಿರುವ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕೂ ಮುನ್ನ, ಅಧಿಕಾರಿಗಳ ತಂಡ ಸರ್ವೆ ನಡೆಸಿ ಪೋಡಿಯಾದ ನಂತರವೇ ಕಾಂಪೌಂಡ್ ನಿರ್ಮಾಣ ಮಾಡಲಿ ಎಂದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೋಡಿ ಅಂದೋಲನದಲ್ಲಿ ಸಾಸಲು ಹೋಬಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಸಂಪೂರ್ಣ ಹೋಬಳಿಯನ್ನ ಪೋಡಿ ಮುಕ್ತ ಮಾಡಲಾಗುವುದು. ಕಾಂಪೌಂಡ್ ನಿರ್ಮಾಣ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಉಪ ತಹಶೀಲ್ದಾರ್ ನೇತೃತ್ವದಲ್ಲಿ 6 ಸರ್ವೆಯರ್ಸ್, ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೇಕ್ಟರ್, ಮತ್ತು ಪೊಲೀಸು ಒಳಗೊಂಡ ತಂಡ ರಚನೆ ಮಾಡಲಾಗಿದೆ‌ ಎಂದರು.

ಅಧಿಕಾರಿಗಳ ತಂಡ ಮೂರು ಗ್ರಾಮಗಳ ಸಂಪೂರ್ಣ ಸರ್ವೆ ಮಾಡುವರು, ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿರುವ, ಖಾತೆ ಮಾಡಿಸಿಕೊಂಡಿರುವ, ಮಾರಾಟ ಮಾಡಿರುವ ಮತ್ತು ಅನಧಿಕೃತವಾಗಿರುವ ರೈತರ ಬಗ್ಗೆ ಮಾಹಿತಿ ಕಲೆ ಹಾಕಿ 15 ದಿನದೊಳಗೆ ವರದಿ ಸಲ್ಲಿಸುವರು. ವರದಿ ಆಧಾರದ ಮೇಲೆ ಅನಧಿಕೃತವಾಗಿರುವರನ್ನ ತೆರವು ಮಾಡಲಾಗುವುದು, ಸರ್ಕಾರಿ ಗೋಮಾಳವನ್ನ ಸರ್ಕಾರದ ವಶಕ್ಕೆ ಪಡೆಯುವುದ್ದಾಗಿ ಹೇಳಿದರು.

ಸಾಗುವಳಿದಾರರಾದ ರಾಮಕ್ಕ ಮಾತನಾಡಿ, ನಮ್ಮ ಅತ್ತೆ ಮಾವನ ಕಾಲದಿಂದ ನಾವು ಈ ಜಾಗದಲ್ಲಿ ವ್ಯವ್ಯಸಾಯ ಮಾಡುತ್ತಿದ್ದೇವೆ, ಉಪ ವಿಭಾಗಾಧಿಕಾರಿಗಳಿಂದ ಆದೇಶವಾಗಿದೆ, ಜಮೀನಿನ ಸ್ಕೇಚ್ ಆಗಿದೆ, ನಮ್ಮ ಬಳಿ ಜಮೀನಿನ ದಾಖಲೆಗಳಿದ್ದರು ದೌರ್ಜನ್ಯದಿಂದ ನಮ್ಮನ್ನು ಇಲ್ಲಿಂದ ಓಡಿಸಲು ಯತ್ನಿಸುತ್ತಿದ್ದಾರೆ, ತಹಶೀಲ್ದಾರ್ ಮಾತಿನ ಮೇಲೆ ನಂಬಿಕೆ ಇದೆ, ನ್ಯಾಯ ಸಿಗುವ ಭರವಸೆ ಇದೆ ಎಂದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

5 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

14 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

24 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago