ಪೋಡಿ ಮಾಡಿಸದೆ ಸರ್ಕಾರಿ ಭೂಮಿಯಲ್ಲಿ ಕಾಂಪೌಂಡ್ ನಿರ್ಮಾಣ: ರೈತರ ಆಕ್ರೋಶ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್:

ದೊಡ್ಡಬಳ್ಳಾಪುರ : ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ ಎಂದು ತಿಳಿದುಬಂದಿದೆ. ಬಲಾಢ್ಯರೊಬ್ಬರು ಪೋಡಿ ಮಾಡಸದೇ ಸರ್ಕಾರಿ ಗೋಮಾಳದಲ್ಲಿಯೂ ಸಹ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ. ಈ ಕುರಿತು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಲಾಢ್ಯರ ಅತಿಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಕಾಂಪೌಂಡ್ ನಿರ್ಮಾಣವನ್ನ ತಡೆ ಹಿಡಿದಿದದು, ಪೋಡಿ ನಂತರ ಅನಧಿಕೃತ ಸಾಗುವಳಿದಾರನ್ನು ತೆರವು ಮಾಡಿ ಸರ್ಕಾರಿ ಜಾಗವನ್ನ ವಶಕ್ಕೆ ಪಡೆಯುವುದಾಗಿ ಹೇಳಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲೇಗೌಡನಪಾಳ್ಯ, ಲಕ್ಕೇನಹಳ್ಳಿ, ಸಿಂಗೇಹಳ್ಳಿ ಸರ್ವೆ ನಂಬರ್ ಗಳಲ್ಲಿ ಸುಮಾರು 600ಕ್ಕೂ ಹೆಚ್ಚು ಎಕರೆ ಸರ್ಕಾರಿ ಗೋಮಾಳವಿದೆ, ಸುತ್ತಮುತ್ತಲಿನ ರೈತರು ನೂರಾರು ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿದ್ದು, ಸಾಗುವಳಿ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ಫಾರಂ 53, 57 ಅರ್ಜಿಯನ್ನು ಸಲ್ಲಿಸಿದ್ದಾರೆ, ಕೆಲವು ರೈತರಿಗೆ ಭೂ ಮಂಜೂರಾತಿಯಾಗಿದೆ. ಬಲಾಢ್ಯನೊಬ್ಬ ಸರ್ಕಾರಿ ಗೋಮಾಳದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸರ್ಕಾರಿ ಗೋಮಾಳ ಹತ್ತಾರು ಗ್ರಾಮಗಳಲ್ಲಿನ ಜಾನುವಾರುಗಳ ಮೇವಿನ ತಾಣ, ಪಶುಸಂಗೋಪನೆ ನಂಬಿಕೊಂಡು ನೂರಾರು ಕುಟುಂಬಗಳು ಜೀವನ ಮಾಡುತ್ತಿವೆ, ಇದೇ ಗೋಮಾಳದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದ್ದು, ಜಾನುವಾರುಗಳ ಪ್ರವೇಶಿಸದಂತೆ ತಡೆಯುಲಾಗುತ್ತಿದೆ ಎಂಬುದು ರೈತರ ಆರೋಪವಾಗಿದೆ‌. ಕಾಂಪೌಂಡ್ ನಿರ್ಮಾಣಕ್ಕೆ ತಡೆ ಹಾಕುವಂತೆ ತಹಶೀಲ್ದಾರ್ ರವರಿಗೆ ಮನವಿ ಮಾಡಿದರು.

ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಸರ್ವೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ರೈತರೊಂದಿಗೆ ಮಾತನಾಡಿದ ಅಧಿಕಾರಿಗಳ ತಂಡ ಕಾಂಪೌಂಡ್ ನಿರ್ಮಾಣಕ್ಕೆ ತಡೆ ನೀಡಲಾಗಿದೆ, ಪೋಡಿಯಾಗುವ ವರೆಗೂ ಕಾಂಪೌಂಡ್ ನಿರ್ಮಾಣ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಟಿ.ವೆಂಕಟರಣಯ್ಯ, ಹಲವು ವರ್ಷಗಳಿಂದ ಸಾಗುವಳಿ ರೈತರು ಮತ್ತು ರೈತರಿಂದ ಭೂಮಿ ಖರೀದಿ ಮಾಡಿರುವ ಖಾಸಗಿ ಫೌರ್ಮ್ ನವರಿದ್ದಾರೆ, ಇವರಿಬ್ಬರ ನಡುವಿನ ಗೊಂದಲದಿಂದ ಸಮಸ್ಯೆಯುಂಟಾಗಿದೆ, ಕ್ರಯ ಮಾಡಿಕೊಂಡಿರುವ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕೂ ಮುನ್ನ, ಅಧಿಕಾರಿಗಳ ತಂಡ ಸರ್ವೆ ನಡೆಸಿ ಪೋಡಿಯಾದ ನಂತರವೇ ಕಾಂಪೌಂಡ್ ನಿರ್ಮಾಣ ಮಾಡಲಿ ಎಂದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ಪೋಡಿ ಅಂದೋಲನದಲ್ಲಿ ಸಾಸಲು ಹೋಬಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಸಂಪೂರ್ಣ ಹೋಬಳಿಯನ್ನ ಪೋಡಿ ಮುಕ್ತ ಮಾಡಲಾಗುವುದು. ಕಾಂಪೌಂಡ್ ನಿರ್ಮಾಣ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಉಪ ತಹಶೀಲ್ದಾರ್ ನೇತೃತ್ವದಲ್ಲಿ 6 ಸರ್ವೆಯರ್ಸ್, ಗ್ರಾಮ ಆಡಳಿತಾಧಿಕಾರಿ, ರೆವಿನ್ಯೂ ಇನ್ಸ್ ಪೇಕ್ಟರ್, ಮತ್ತು ಪೊಲೀಸು ಒಳಗೊಂಡ ತಂಡ ರಚನೆ ಮಾಡಲಾಗಿದೆ‌ ಎಂದರು.

ಅಧಿಕಾರಿಗಳ ತಂಡ ಮೂರು ಗ್ರಾಮಗಳ ಸಂಪೂರ್ಣ ಸರ್ವೆ ಮಾಡುವರು, ಸರ್ಕಾರಿ ಗೋಮಾಳದಲ್ಲಿ ಅನುಭೋಗದಲ್ಲಿರುವ, ಖಾತೆ ಮಾಡಿಸಿಕೊಂಡಿರುವ, ಮಾರಾಟ ಮಾಡಿರುವ ಮತ್ತು ಅನಧಿಕೃತವಾಗಿರುವ ರೈತರ ಬಗ್ಗೆ ಮಾಹಿತಿ ಕಲೆ ಹಾಕಿ 15 ದಿನದೊಳಗೆ ವರದಿ ಸಲ್ಲಿಸುವರು. ವರದಿ ಆಧಾರದ ಮೇಲೆ ಅನಧಿಕೃತವಾಗಿರುವರನ್ನ ತೆರವು ಮಾಡಲಾಗುವುದು, ಸರ್ಕಾರಿ ಗೋಮಾಳವನ್ನ ಸರ್ಕಾರದ ವಶಕ್ಕೆ ಪಡೆಯುವುದ್ದಾಗಿ ಹೇಳಿದರು.

ಸಾಗುವಳಿದಾರರಾದ ರಾಮಕ್ಕ ಮಾತನಾಡಿ, ನಮ್ಮ ಅತ್ತೆ ಮಾವನ ಕಾಲದಿಂದ ನಾವು ಈ ಜಾಗದಲ್ಲಿ ವ್ಯವ್ಯಸಾಯ ಮಾಡುತ್ತಿದ್ದೇವೆ, ಉಪ ವಿಭಾಗಾಧಿಕಾರಿಗಳಿಂದ ಆದೇಶವಾಗಿದೆ, ಜಮೀನಿನ ಸ್ಕೇಚ್ ಆಗಿದೆ, ನಮ್ಮ ಬಳಿ ಜಮೀನಿನ ದಾಖಲೆಗಳಿದ್ದರು ದೌರ್ಜನ್ಯದಿಂದ ನಮ್ಮನ್ನು ಇಲ್ಲಿಂದ ಓಡಿಸಲು ಯತ್ನಿಸುತ್ತಿದ್ದಾರೆ, ತಹಶೀಲ್ದಾರ್ ಮಾತಿನ ಮೇಲೆ ನಂಬಿಕೆ ಇದೆ, ನ್ಯಾಯ ಸಿಗುವ ಭರವಸೆ ಇದೆ ಎಂದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

5 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

8 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

14 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago