ಪೋಷಕರು, ಶಾಲಾ ಸಂಸ್ಥೆಗಳು, ವಾಹನ ಮಾಲೀಕರು, ಚಾಲಕರು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು- ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ

ಶಾಲಾ ವಾಹನ ಚಾಲಕರು ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕರೆದುಕೊಂಡು ಹೋಗಿ, ಮನೆಗೆ ತಂದು ಬಿಡುವ  ಕಾರ್ಯವನ್ನು ಉತ್ತಮವಾಗಿ ನಿಭಾಯಿಸಬೇಕು ಎಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಸೂಚಿಸಿದರು.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಠಾಣಾ ಆವರಣದಲ್ಲಿಂದು ವಾಹನ ಚಾಲಕರಿಗೆ ಕಟ್ಟುನಿಟ್ಟಾಗಿ ಪಾಲಿಸಬೇಕಾದ ಸಂಚಾರಿ ನಿಯಮಾವಳಿಗಳ ಕುರಿತು ಜಾಗೃತಿ ಮೂಡಿಸಿದರು.

ಪೋಷಕರು, ಶಾಲಾ ಸಂಸ್ಥೆಗಳು, ವಾಹನ ಮಾಲೀಕರು ಮಕ್ಕಳು ಸುರಕ್ಷತೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು. ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಸುಸ್ಥಿತಿ ಯಲ್ಲಿರುವ ವಾಹನಗಳನ್ನೇ ಶಾಲಾ ವಾಹನಗಳನ್ನಾಗಿ ಬಳಸಬೇಕು. ಶಾಲಾ ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಿರಬೇಕು. ವೇಗದ ಮಿತಿ ಗಂಟೆಗೆ 40 ಕಿ.ಮೀ. ಇರಬೇಕು. ವಾಹನ 15 ವರ್ಷಗಳಿಗಿಂತ ಹಳೆಯದಿರಬಾರದು. ವಾಹನ ಹಳದಿ ಬಣ್ಣದ್ದಾಗಿರಬೇಕು ಮತ್ತು 150 ಮಿ.ಮೀ. ಅಗಲದ ಹಸಿರು ಪಟ್ಟಿ ವಾಹನದ ಮಧ್ಯದುದ್ದಕ್ಕೂ ಇರಬೇಕು. ಎಲ್ಲ ನಾಲ್ಕು ಬದಿಗಳಲ್ಲಿ ‘ಶಾಲಾ ವಾಹನ’ ಎಂದು ಸ್ಪಷ್ಟವಾಗಿ ಮತ್ತು ದೊಡ್ಡದಾಗಿ ಬರೆದಿರಬೇಕು. ಮಕ್ಕಳು 12 ವರ್ಷಕ್ಕಿಂತ ಕೆಳಗಿನವರಿದ್ದರೆ ಅನುಮತಿ ಇರುವ ಸಂಖ್ಯೆಯ ಸೀಟಿಗಿಂತ ಒಂದೂವರೆ ಪಟ್ಟಿಗಿಂತ ಮಕ್ಕಳು ಹೆಚ್ಚಿರಬಾರದು. 12 ವರ್ಷ ಮೇಲ್ಪಟ್ಟ ಮಕ್ಕಳನ್ನು ಒಬ್ಬ ವ್ಯಕ್ತಿ ಎಂದು ಪರಿಗಣಿಸಬೇಕು. ವಾಹನದಲ್ಲಿ ಎಲ್‌ಪಿಜಿ ಅಳವಡಿಸಲಾಗಿದ್ದರೆ ಸಂಬಂಧಿತ ನೋಂದಾವಣೆ ಅಧಿಕಾರಿಯಿಂದ ಪ್ರಮಾಣಪತ್ರ ಪಡೆದಿರಬೇಕು. ಮಕ್ಕಳನ್ನು ಸಿಲಿಂಡರ್ ಇರುವ ಸ್ಥಳದ ಮೇಲೆ ಕೂಡಿಸಬಾರದು ಎಂದು‌ ತಿಳಿಸಿದರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ ಮಾತನಾಡಿ, ವಾಹನದ ಗಾಜಿಗೆ ಬಣ್ಣದ ಶೀಟುಗಳನ್ನು ಬಳಸುವಂತಿಲ್ಲ. ಚಾಲಕನ ಬಳಿ ಕನಿಷ್ಠ ನಾಲ್ಕು ವರ್ಷ ಹಗುರ ವಾಹನ ಓಡಿಸಿದ ಅನುಭವವಿರಬೇಕು ಮತ್ತು ನ್ಯಾಯಸಮ್ಮತವಾದ ಲೈಸೆನ್ಸ್ ಇರಬೇಕು. ಸಮವಸ್ತ್ರ ಕಡ್ಡಾಯ, ಅಂಗಿಯ ಮೇಲೆ ಹೆಸರಿನ ಪ್ಲೇಟ್ ಇರಬೇಕು. ವಾಹನದ ಮೇಲೆ ಇರುವ ಕ್ಯಾರಿಯರ್ ಮೇಲೆ ಬ್ಯಾಗ್ ಇಡತಕ್ಕದ್ದಲ್ಲ ಮತ್ತು ವಾಹನದ ಹೊರಗಡೆ ಬ್ಯಾಗುಗಳನ್ನು ನೇತುಹಾಕುವಂತಿಲ್ಲ. ವಾಹನದ ಹಿಂಬದಿಯಲ್ಲಿ ಚಾಲಕನ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮುಂತಾದ ವಿವರಗಳನ್ನು ಲಗತ್ತಿಸಬೇಕು. ವಿದ್ಯಾರ್ಥಿಯ ಹೆಸರು, ವಿಳಾಸ, ರಕ್ತದ ಗುಂಪು, ತರಗತಿ, ವಾಹನ ಹತ್ತಿಳಿಯುವ ಸ್ಥಳ, ವಾಹನ ಚಲಿಸುವ ಮಾರ್ಗ ಮುಂತಾದ ವಿವರಗಳನ್ನು ಚಾಲಕ ಬರೆದಿಟ್ಟುಕೊಂಡಿರಬೇಕು ಎಂದರು.

ತುರ್ತು ಪರಿಸ್ಥಿತಿ ಎದುರಾದಾಗ ಡ್ರೈವರ್ ಅಥವಾ ಸಹಾಯಕ ಶಾಲೆಗೆ ಮಾಹಿತಿ ನೀಡಬೇಕು ಮತ್ತು ಮಕ್ಕಳನ್ನು ಸುರಕ್ಷಿತವಾಗಿರಿಸಲು ತಕ್ಕ ವ್ಯವಸ್ಥೆ ಮಾಡಬೇಕು.

ಮಗು ನರ್ಸರಿಯಲ್ಲಿ ಓದುತ್ತಿದ್ದರೆ, ಶಾಲೆ ಮತ್ತು ಪಾಲಕರು ಗುರುತಿಸುವಂಥ ವ್ಯಕ್ತಿ ಬಾರದೆಹೋದರೆ, ಮಗುವನ್ನು ಶಾಲೆಗೆ ಮರಳಿ ತರತಕ್ಕದ್ದು. ಮಗುವನ್ನು ಪಾಲಕರೇ ಶಾಲೆಗೆ ಬಂದು ಕರೆದುಕೊಂಡು ಹೋಗಬೇಕು ಎಂದು ಸೂಚಿಸಿದರು.

ಚಾಲಕ ಚಾಲನೆ ಮಾಡುವಾಗ, ಪಾನಮತ್ತನಾಗಿ, ಮೊಬೈಲ್ ಬಳಸುವುದನ್ನು ನಿರ್ಬಂಧಿಸಲಾಗಿದೆ. ತುರ್ತು ನಿರ್ಗಮನ ಕಡ್ಡಾಯ. ವಾಹನಗಳಲ್ಲಿ ಸಿಸಿಟಿವಿ, ಅಗ್ನಿ ಶಾಮಕ ಉಪಕರಣ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಬೇಕು. ತುರ್ತು ನಿರ್ಗಮನಕ್ಕೆ ಅನುಕೂಲಕರ ಡೋರ್‌ ಇರಬೇಕು ಎಂದು ತಿಳಿಸಿದರು.

ನಿಯಮಗಳನ್ನು ಪಾಲಿಸದ ಚಾಲಕರು ಮತ್ತು ಸಂಸ್ಥೆಗಳಿಗೆ ಮೊದಲು ದಂಡ ವಿಧಿಸುತ್ತೇವೆ. ತಪ್ಪುಗಳು ಪುನರಾವರ್ತನೆ ಆದಲ್ಲಿ ವಾಹನ ನಿಯಂತ್ರಣ ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

7 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

9 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

9 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

11 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

19 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago