ಪೋಷಕರು, ಶಾಲಾ ಸಂಸ್ಥೆಗಳು, ವಾಹನ ಮಾಲೀಕರು, ಚಾಲಕರು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು- ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ

ಶಾಲಾ ವಾಹನ ಚಾಲಕರು ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕರೆದುಕೊಂಡು ಹೋಗಿ, ಮನೆಗೆ ತಂದು ಬಿಡುವ  ಕಾರ್ಯವನ್ನು ಉತ್ತಮವಾಗಿ ನಿಭಾಯಿಸಬೇಕು ಎಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಸೂಚಿಸಿದರು.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಠಾಣಾ ಆವರಣದಲ್ಲಿಂದು ವಾಹನ ಚಾಲಕರಿಗೆ ಕಟ್ಟುನಿಟ್ಟಾಗಿ ಪಾಲಿಸಬೇಕಾದ ಸಂಚಾರಿ ನಿಯಮಾವಳಿಗಳ ಕುರಿತು ಜಾಗೃತಿ ಮೂಡಿಸಿದರು.

ಪೋಷಕರು, ಶಾಲಾ ಸಂಸ್ಥೆಗಳು, ವಾಹನ ಮಾಲೀಕರು ಮಕ್ಕಳು ಸುರಕ್ಷತೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು. ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಸುಸ್ಥಿತಿ ಯಲ್ಲಿರುವ ವಾಹನಗಳನ್ನೇ ಶಾಲಾ ವಾಹನಗಳನ್ನಾಗಿ ಬಳಸಬೇಕು. ಶಾಲಾ ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಿರಬೇಕು. ವೇಗದ ಮಿತಿ ಗಂಟೆಗೆ 40 ಕಿ.ಮೀ. ಇರಬೇಕು. ವಾಹನ 15 ವರ್ಷಗಳಿಗಿಂತ ಹಳೆಯದಿರಬಾರದು. ವಾಹನ ಹಳದಿ ಬಣ್ಣದ್ದಾಗಿರಬೇಕು ಮತ್ತು 150 ಮಿ.ಮೀ. ಅಗಲದ ಹಸಿರು ಪಟ್ಟಿ ವಾಹನದ ಮಧ್ಯದುದ್ದಕ್ಕೂ ಇರಬೇಕು. ಎಲ್ಲ ನಾಲ್ಕು ಬದಿಗಳಲ್ಲಿ ‘ಶಾಲಾ ವಾಹನ’ ಎಂದು ಸ್ಪಷ್ಟವಾಗಿ ಮತ್ತು ದೊಡ್ಡದಾಗಿ ಬರೆದಿರಬೇಕು. ಮಕ್ಕಳು 12 ವರ್ಷಕ್ಕಿಂತ ಕೆಳಗಿನವರಿದ್ದರೆ ಅನುಮತಿ ಇರುವ ಸಂಖ್ಯೆಯ ಸೀಟಿಗಿಂತ ಒಂದೂವರೆ ಪಟ್ಟಿಗಿಂತ ಮಕ್ಕಳು ಹೆಚ್ಚಿರಬಾರದು. 12 ವರ್ಷ ಮೇಲ್ಪಟ್ಟ ಮಕ್ಕಳನ್ನು ಒಬ್ಬ ವ್ಯಕ್ತಿ ಎಂದು ಪರಿಗಣಿಸಬೇಕು. ವಾಹನದಲ್ಲಿ ಎಲ್‌ಪಿಜಿ ಅಳವಡಿಸಲಾಗಿದ್ದರೆ ಸಂಬಂಧಿತ ನೋಂದಾವಣೆ ಅಧಿಕಾರಿಯಿಂದ ಪ್ರಮಾಣಪತ್ರ ಪಡೆದಿರಬೇಕು. ಮಕ್ಕಳನ್ನು ಸಿಲಿಂಡರ್ ಇರುವ ಸ್ಥಳದ ಮೇಲೆ ಕೂಡಿಸಬಾರದು ಎಂದು‌ ತಿಳಿಸಿದರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ ಮಾತನಾಡಿ, ವಾಹನದ ಗಾಜಿಗೆ ಬಣ್ಣದ ಶೀಟುಗಳನ್ನು ಬಳಸುವಂತಿಲ್ಲ. ಚಾಲಕನ ಬಳಿ ಕನಿಷ್ಠ ನಾಲ್ಕು ವರ್ಷ ಹಗುರ ವಾಹನ ಓಡಿಸಿದ ಅನುಭವವಿರಬೇಕು ಮತ್ತು ನ್ಯಾಯಸಮ್ಮತವಾದ ಲೈಸೆನ್ಸ್ ಇರಬೇಕು. ಸಮವಸ್ತ್ರ ಕಡ್ಡಾಯ, ಅಂಗಿಯ ಮೇಲೆ ಹೆಸರಿನ ಪ್ಲೇಟ್ ಇರಬೇಕು. ವಾಹನದ ಮೇಲೆ ಇರುವ ಕ್ಯಾರಿಯರ್ ಮೇಲೆ ಬ್ಯಾಗ್ ಇಡತಕ್ಕದ್ದಲ್ಲ ಮತ್ತು ವಾಹನದ ಹೊರಗಡೆ ಬ್ಯಾಗುಗಳನ್ನು ನೇತುಹಾಕುವಂತಿಲ್ಲ. ವಾಹನದ ಹಿಂಬದಿಯಲ್ಲಿ ಚಾಲಕನ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮುಂತಾದ ವಿವರಗಳನ್ನು ಲಗತ್ತಿಸಬೇಕು. ವಿದ್ಯಾರ್ಥಿಯ ಹೆಸರು, ವಿಳಾಸ, ರಕ್ತದ ಗುಂಪು, ತರಗತಿ, ವಾಹನ ಹತ್ತಿಳಿಯುವ ಸ್ಥಳ, ವಾಹನ ಚಲಿಸುವ ಮಾರ್ಗ ಮುಂತಾದ ವಿವರಗಳನ್ನು ಚಾಲಕ ಬರೆದಿಟ್ಟುಕೊಂಡಿರಬೇಕು ಎಂದರು.

ತುರ್ತು ಪರಿಸ್ಥಿತಿ ಎದುರಾದಾಗ ಡ್ರೈವರ್ ಅಥವಾ ಸಹಾಯಕ ಶಾಲೆಗೆ ಮಾಹಿತಿ ನೀಡಬೇಕು ಮತ್ತು ಮಕ್ಕಳನ್ನು ಸುರಕ್ಷಿತವಾಗಿರಿಸಲು ತಕ್ಕ ವ್ಯವಸ್ಥೆ ಮಾಡಬೇಕು.

ಮಗು ನರ್ಸರಿಯಲ್ಲಿ ಓದುತ್ತಿದ್ದರೆ, ಶಾಲೆ ಮತ್ತು ಪಾಲಕರು ಗುರುತಿಸುವಂಥ ವ್ಯಕ್ತಿ ಬಾರದೆಹೋದರೆ, ಮಗುವನ್ನು ಶಾಲೆಗೆ ಮರಳಿ ತರತಕ್ಕದ್ದು. ಮಗುವನ್ನು ಪಾಲಕರೇ ಶಾಲೆಗೆ ಬಂದು ಕರೆದುಕೊಂಡು ಹೋಗಬೇಕು ಎಂದು ಸೂಚಿಸಿದರು.

ಚಾಲಕ ಚಾಲನೆ ಮಾಡುವಾಗ, ಪಾನಮತ್ತನಾಗಿ, ಮೊಬೈಲ್ ಬಳಸುವುದನ್ನು ನಿರ್ಬಂಧಿಸಲಾಗಿದೆ. ತುರ್ತು ನಿರ್ಗಮನ ಕಡ್ಡಾಯ. ವಾಹನಗಳಲ್ಲಿ ಸಿಸಿಟಿವಿ, ಅಗ್ನಿ ಶಾಮಕ ಉಪಕರಣ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಬೇಕು. ತುರ್ತು ನಿರ್ಗಮನಕ್ಕೆ ಅನುಕೂಲಕರ ಡೋರ್‌ ಇರಬೇಕು ಎಂದು ತಿಳಿಸಿದರು.

ನಿಯಮಗಳನ್ನು ಪಾಲಿಸದ ಚಾಲಕರು ಮತ್ತು ಸಂಸ್ಥೆಗಳಿಗೆ ಮೊದಲು ದಂಡ ವಿಧಿಸುತ್ತೇವೆ. ತಪ್ಪುಗಳು ಪುನರಾವರ್ತನೆ ಆದಲ್ಲಿ ವಾಹನ ನಿಯಂತ್ರಣ ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

16 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago