ಪೋಷಕರು, ಶಾಲಾ ಸಂಸ್ಥೆಗಳು, ವಾಹನ ಮಾಲೀಕರು, ಚಾಲಕರು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು- ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ

ಶಾಲಾ ವಾಹನ ಚಾಲಕರು ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕರೆದುಕೊಂಡು ಹೋಗಿ, ಮನೆಗೆ ತಂದು ಬಿಡುವ  ಕಾರ್ಯವನ್ನು ಉತ್ತಮವಾಗಿ ನಿಭಾಯಿಸಬೇಕು ಎಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಸೂಚಿಸಿದರು.

ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರ ನೇತೃತ್ವದಲ್ಲಿ ಠಾಣಾ ಆವರಣದಲ್ಲಿಂದು ವಾಹನ ಚಾಲಕರಿಗೆ ಕಟ್ಟುನಿಟ್ಟಾಗಿ ಪಾಲಿಸಬೇಕಾದ ಸಂಚಾರಿ ನಿಯಮಾವಳಿಗಳ ಕುರಿತು ಜಾಗೃತಿ ಮೂಡಿಸಿದರು.

ಪೋಷಕರು, ಶಾಲಾ ಸಂಸ್ಥೆಗಳು, ವಾಹನ ಮಾಲೀಕರು ಮಕ್ಕಳು ಸುರಕ್ಷತೆಯನ್ನು ಆದ್ಯತೆಯಾಗಿ ಸ್ವೀಕರಿಸಬೇಕು. ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಸುಸ್ಥಿತಿ ಯಲ್ಲಿರುವ ವಾಹನಗಳನ್ನೇ ಶಾಲಾ ವಾಹನಗಳನ್ನಾಗಿ ಬಳಸಬೇಕು. ಶಾಲಾ ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಿರಬೇಕು. ವೇಗದ ಮಿತಿ ಗಂಟೆಗೆ 40 ಕಿ.ಮೀ. ಇರಬೇಕು. ವಾಹನ 15 ವರ್ಷಗಳಿಗಿಂತ ಹಳೆಯದಿರಬಾರದು. ವಾಹನ ಹಳದಿ ಬಣ್ಣದ್ದಾಗಿರಬೇಕು ಮತ್ತು 150 ಮಿ.ಮೀ. ಅಗಲದ ಹಸಿರು ಪಟ್ಟಿ ವಾಹನದ ಮಧ್ಯದುದ್ದಕ್ಕೂ ಇರಬೇಕು. ಎಲ್ಲ ನಾಲ್ಕು ಬದಿಗಳಲ್ಲಿ ‘ಶಾಲಾ ವಾಹನ’ ಎಂದು ಸ್ಪಷ್ಟವಾಗಿ ಮತ್ತು ದೊಡ್ಡದಾಗಿ ಬರೆದಿರಬೇಕು. ಮಕ್ಕಳು 12 ವರ್ಷಕ್ಕಿಂತ ಕೆಳಗಿನವರಿದ್ದರೆ ಅನುಮತಿ ಇರುವ ಸಂಖ್ಯೆಯ ಸೀಟಿಗಿಂತ ಒಂದೂವರೆ ಪಟ್ಟಿಗಿಂತ ಮಕ್ಕಳು ಹೆಚ್ಚಿರಬಾರದು. 12 ವರ್ಷ ಮೇಲ್ಪಟ್ಟ ಮಕ್ಕಳನ್ನು ಒಬ್ಬ ವ್ಯಕ್ತಿ ಎಂದು ಪರಿಗಣಿಸಬೇಕು. ವಾಹನದಲ್ಲಿ ಎಲ್‌ಪಿಜಿ ಅಳವಡಿಸಲಾಗಿದ್ದರೆ ಸಂಬಂಧಿತ ನೋಂದಾವಣೆ ಅಧಿಕಾರಿಯಿಂದ ಪ್ರಮಾಣಪತ್ರ ಪಡೆದಿರಬೇಕು. ಮಕ್ಕಳನ್ನು ಸಿಲಿಂಡರ್ ಇರುವ ಸ್ಥಳದ ಮೇಲೆ ಕೂಡಿಸಬಾರದು ಎಂದು‌ ತಿಳಿಸಿದರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ ಮಾತನಾಡಿ, ವಾಹನದ ಗಾಜಿಗೆ ಬಣ್ಣದ ಶೀಟುಗಳನ್ನು ಬಳಸುವಂತಿಲ್ಲ. ಚಾಲಕನ ಬಳಿ ಕನಿಷ್ಠ ನಾಲ್ಕು ವರ್ಷ ಹಗುರ ವಾಹನ ಓಡಿಸಿದ ಅನುಭವವಿರಬೇಕು ಮತ್ತು ನ್ಯಾಯಸಮ್ಮತವಾದ ಲೈಸೆನ್ಸ್ ಇರಬೇಕು. ಸಮವಸ್ತ್ರ ಕಡ್ಡಾಯ, ಅಂಗಿಯ ಮೇಲೆ ಹೆಸರಿನ ಪ್ಲೇಟ್ ಇರಬೇಕು. ವಾಹನದ ಮೇಲೆ ಇರುವ ಕ್ಯಾರಿಯರ್ ಮೇಲೆ ಬ್ಯಾಗ್ ಇಡತಕ್ಕದ್ದಲ್ಲ ಮತ್ತು ವಾಹನದ ಹೊರಗಡೆ ಬ್ಯಾಗುಗಳನ್ನು ನೇತುಹಾಕುವಂತಿಲ್ಲ. ವಾಹನದ ಹಿಂಬದಿಯಲ್ಲಿ ಚಾಲಕನ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮುಂತಾದ ವಿವರಗಳನ್ನು ಲಗತ್ತಿಸಬೇಕು. ವಿದ್ಯಾರ್ಥಿಯ ಹೆಸರು, ವಿಳಾಸ, ರಕ್ತದ ಗುಂಪು, ತರಗತಿ, ವಾಹನ ಹತ್ತಿಳಿಯುವ ಸ್ಥಳ, ವಾಹನ ಚಲಿಸುವ ಮಾರ್ಗ ಮುಂತಾದ ವಿವರಗಳನ್ನು ಚಾಲಕ ಬರೆದಿಟ್ಟುಕೊಂಡಿರಬೇಕು ಎಂದರು.

ತುರ್ತು ಪರಿಸ್ಥಿತಿ ಎದುರಾದಾಗ ಡ್ರೈವರ್ ಅಥವಾ ಸಹಾಯಕ ಶಾಲೆಗೆ ಮಾಹಿತಿ ನೀಡಬೇಕು ಮತ್ತು ಮಕ್ಕಳನ್ನು ಸುರಕ್ಷಿತವಾಗಿರಿಸಲು ತಕ್ಕ ವ್ಯವಸ್ಥೆ ಮಾಡಬೇಕು.

ಮಗು ನರ್ಸರಿಯಲ್ಲಿ ಓದುತ್ತಿದ್ದರೆ, ಶಾಲೆ ಮತ್ತು ಪಾಲಕರು ಗುರುತಿಸುವಂಥ ವ್ಯಕ್ತಿ ಬಾರದೆಹೋದರೆ, ಮಗುವನ್ನು ಶಾಲೆಗೆ ಮರಳಿ ತರತಕ್ಕದ್ದು. ಮಗುವನ್ನು ಪಾಲಕರೇ ಶಾಲೆಗೆ ಬಂದು ಕರೆದುಕೊಂಡು ಹೋಗಬೇಕು ಎಂದು ಸೂಚಿಸಿದರು.

ಚಾಲಕ ಚಾಲನೆ ಮಾಡುವಾಗ, ಪಾನಮತ್ತನಾಗಿ, ಮೊಬೈಲ್ ಬಳಸುವುದನ್ನು ನಿರ್ಬಂಧಿಸಲಾಗಿದೆ. ತುರ್ತು ನಿರ್ಗಮನ ಕಡ್ಡಾಯ. ವಾಹನಗಳಲ್ಲಿ ಸಿಸಿಟಿವಿ, ಅಗ್ನಿ ಶಾಮಕ ಉಪಕರಣ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಬೇಕು. ತುರ್ತು ನಿರ್ಗಮನಕ್ಕೆ ಅನುಕೂಲಕರ ಡೋರ್‌ ಇರಬೇಕು ಎಂದು ತಿಳಿಸಿದರು.

ನಿಯಮಗಳನ್ನು ಪಾಲಿಸದ ಚಾಲಕರು ಮತ್ತು ಸಂಸ್ಥೆಗಳಿಗೆ ಮೊದಲು ದಂಡ ವಿಧಿಸುತ್ತೇವೆ. ತಪ್ಪುಗಳು ಪುನರಾವರ್ತನೆ ಆದಲ್ಲಿ ವಾಹನ ನಿಯಂತ್ರಣ ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago