Categories: ಕೋಲಾರ

ಪೌರಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸಿಎಂನೊಂದಿಗೆ ಚರ್ಚೆ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ :ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯೊಂದಿಗೆ ಚರ್ಚೆ ನೆಡೆಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಪೌರಕಾರ್ಮಿಕರು ಕೋಲಾರ ಜನತೆಯ ಪೌಷ್ಟಿಕಾಂಶ ಇದ್ದಂತೆ ಅವರು ಯಾವುದೇ ಜಾತಿ, ಧರ್ಮ, ಬಡವ, ಶ್ರೀಮಂತ ಎನ್ನದೇ ಎಲ್ಲರ ಮನೆಯ ಮುಂದೆ ಸ್ವಚ್ಚತೆ ಮಾಡಿ ನಮ್ಮ ಆರೋಗ್ಯ ಕಾಪಾಡಿದ್ದಾರೆ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಪೌರಕಾರ್ಮಿಕರ ಒಳಿತಿಗಾಗಿ ಸದಾ ಶ್ರಮಿಸಲು ನಾನು ಸಿದ್ಧ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರುವ ಕಡತಗಳನ್ನು ಸರ್ಕಾರಕ್ಕೆ ರವಾನಿಸಲು ಶೀಘ್ರದಲ್ಲೇ ಮಾಡುತ್ತೇನೆ ಕಾರ್ಮಿಕರಿಗೆ ನಿವೇಶನ ಮತ್ತು ಮನೆಗಳ ನಿರ್ಮಾಣಕ್ಕೆ ನಾವು ಸಿದ್ದವಿದ್ದು ಪೌರಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎರಡು ತಿಂಗಳಿಗೊಮ್ಮೆ ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಸಭೆ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಪೌರಕಾರ್ಮಿಕರ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ದೇನೆ. ಪೌರಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ನೀಡಲು ಒತ್ತಾಯಿಸಿದ್ದೇನೆ. ಖಾಯಂ ನೌಕರರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ ಯಾಕೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಇಂದಿಗೂ ಎಷ್ಟೋ ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೇ ಮಲಹೊರುವ ಪದ್ದತಿ ಇದೆ ಪೌರಕಾರ್ಮಿಕರೇ ಆ ಕೆಲಸ ಮಾಡುತ್ತಿರುವುದು ಅಮಾನವೀಯ ಎನಿಸುತ್ತದೆ ಎಂದು ವಿಷಾದಿಸಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಮಾತನಾಡಿ, ಪೌರ ಕಾರ್ಮಿಕರು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತಿರುವ ಯೋಧರು, ಅವರು ಮುಂಜಾನೆ ನಗರವನ್ನು ಶುಚಿಗೊಳಿಸಿ ನಮ್ಮನ್ನು ಶುಚಿಗೊಳಿಸಿ ರಕ್ಷಣೆ ಮಾಡುತ್ತಿದ್ದಾರೆ ಪೌರಕಾರ್ಮಿಕರಿಗೆ ಸೇರಬೇಕಾದ ಸೌಲಭ್ಯಗಳನ್ನು ಅತಿ ಶೀಘ್ರದಲ್ಲೇ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಸಭೆಯಿಂದ ಹೊರವಲಯದ ಬಾರಂಡಹಳ್ಳಿ ಸಮೀಪ ನಿವೇಶನ ನೀಡಿ ಮನೆ ಕಟ್ಟಿಸಿಕೊಂಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮನೆಗಳ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರಸಭೆ ಸದಸ್ಯ ಪ್ರಸಾದ್ ಬಾಬು ಮಾತನಾಡಿ, ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ, ಅವರಿಗೆ ಅದು ತಲುಪುವ ತನಕ ವೇದಿಕೆ ಏರುವುದಿಲ್ಲ ಎಂದು ಪ್ರತಿರೋಧ ತೋರುವ ಮೂಲಕ ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿದರು.

ಇದಕ್ಕೂ ಮುನ್ನ ಪೌರಕಾರ್ಮಿಕರು ನಗರದ ಬಂಗಾರಪೇಟೆ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತದನಂತರ ಗಾಂಧಿವನದ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂ.ಜಿ. ರಸ್ತೆ ಮೂಲಕ ರಂಗಮಂದಿರವರೆಗೆ ಕಾರ್ಮಿಕರು ಹಾಗೂ ನಗರಸಭೆ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕುಣಿದು ಕುಪ್ಪಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸಂಗೀತಾ. ಪೌರಾಯುಕ್ತೆ ಅಂಬಿಕಾ, ಸದಸ್ಯರಾದ ರಾಕೇಶ್, ಅಂಬರೀಷ್, ಮುರಳಿಗೌಡ, ಸುರೇಶ್ ಬಾಬು, ಗುಣಶೇಖರ್, ಅಫ್ಸರ್, .ಪ್ರವೀಣ್ ಗೌಡ,ಶಾಮಾ ತಾಜ್, ಮಂಜುನಾಥ್, ಶಾಹಿನ್ ತಾಜ್, ಭಾಗ್ಯಮ್ಮ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವ್ಯೆ. ಶಿವಕುಮಾರ್, ಮಾಲೂರು ಪುರಸಭೆ ಅಧ್ಯಕ್ಷೆ ಕೋಮಲ, ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಮುಂತಾದವರು ಭಾಗವಸಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago