Categories: ಕೋಲಾರ

ಪೌರಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸಿಎಂನೊಂದಿಗೆ ಚರ್ಚೆ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ :ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯೊಂದಿಗೆ ಚರ್ಚೆ ನೆಡೆಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಪೌರಕಾರ್ಮಿಕರು ಕೋಲಾರ ಜನತೆಯ ಪೌಷ್ಟಿಕಾಂಶ ಇದ್ದಂತೆ ಅವರು ಯಾವುದೇ ಜಾತಿ, ಧರ್ಮ, ಬಡವ, ಶ್ರೀಮಂತ ಎನ್ನದೇ ಎಲ್ಲರ ಮನೆಯ ಮುಂದೆ ಸ್ವಚ್ಚತೆ ಮಾಡಿ ನಮ್ಮ ಆರೋಗ್ಯ ಕಾಪಾಡಿದ್ದಾರೆ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಪೌರಕಾರ್ಮಿಕರ ಒಳಿತಿಗಾಗಿ ಸದಾ ಶ್ರಮಿಸಲು ನಾನು ಸಿದ್ಧ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರುವ ಕಡತಗಳನ್ನು ಸರ್ಕಾರಕ್ಕೆ ರವಾನಿಸಲು ಶೀಘ್ರದಲ್ಲೇ ಮಾಡುತ್ತೇನೆ ಕಾರ್ಮಿಕರಿಗೆ ನಿವೇಶನ ಮತ್ತು ಮನೆಗಳ ನಿರ್ಮಾಣಕ್ಕೆ ನಾವು ಸಿದ್ದವಿದ್ದು ಪೌರಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎರಡು ತಿಂಗಳಿಗೊಮ್ಮೆ ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಸಭೆ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಪೌರಕಾರ್ಮಿಕರ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ದೇನೆ. ಪೌರಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ನೀಡಲು ಒತ್ತಾಯಿಸಿದ್ದೇನೆ. ಖಾಯಂ ನೌಕರರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ ಯಾಕೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಇಂದಿಗೂ ಎಷ್ಟೋ ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೇ ಮಲಹೊರುವ ಪದ್ದತಿ ಇದೆ ಪೌರಕಾರ್ಮಿಕರೇ ಆ ಕೆಲಸ ಮಾಡುತ್ತಿರುವುದು ಅಮಾನವೀಯ ಎನಿಸುತ್ತದೆ ಎಂದು ವಿಷಾದಿಸಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಮಾತನಾಡಿ, ಪೌರ ಕಾರ್ಮಿಕರು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತಿರುವ ಯೋಧರು, ಅವರು ಮುಂಜಾನೆ ನಗರವನ್ನು ಶುಚಿಗೊಳಿಸಿ ನಮ್ಮನ್ನು ಶುಚಿಗೊಳಿಸಿ ರಕ್ಷಣೆ ಮಾಡುತ್ತಿದ್ದಾರೆ ಪೌರಕಾರ್ಮಿಕರಿಗೆ ಸೇರಬೇಕಾದ ಸೌಲಭ್ಯಗಳನ್ನು ಅತಿ ಶೀಘ್ರದಲ್ಲೇ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಸಭೆಯಿಂದ ಹೊರವಲಯದ ಬಾರಂಡಹಳ್ಳಿ ಸಮೀಪ ನಿವೇಶನ ನೀಡಿ ಮನೆ ಕಟ್ಟಿಸಿಕೊಂಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮನೆಗಳ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರಸಭೆ ಸದಸ್ಯ ಪ್ರಸಾದ್ ಬಾಬು ಮಾತನಾಡಿ, ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ, ಅವರಿಗೆ ಅದು ತಲುಪುವ ತನಕ ವೇದಿಕೆ ಏರುವುದಿಲ್ಲ ಎಂದು ಪ್ರತಿರೋಧ ತೋರುವ ಮೂಲಕ ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿದರು.

ಇದಕ್ಕೂ ಮುನ್ನ ಪೌರಕಾರ್ಮಿಕರು ನಗರದ ಬಂಗಾರಪೇಟೆ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತದನಂತರ ಗಾಂಧಿವನದ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂ.ಜಿ. ರಸ್ತೆ ಮೂಲಕ ರಂಗಮಂದಿರವರೆಗೆ ಕಾರ್ಮಿಕರು ಹಾಗೂ ನಗರಸಭೆ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕುಣಿದು ಕುಪ್ಪಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸಂಗೀತಾ. ಪೌರಾಯುಕ್ತೆ ಅಂಬಿಕಾ, ಸದಸ್ಯರಾದ ರಾಕೇಶ್, ಅಂಬರೀಷ್, ಮುರಳಿಗೌಡ, ಸುರೇಶ್ ಬಾಬು, ಗುಣಶೇಖರ್, ಅಫ್ಸರ್, .ಪ್ರವೀಣ್ ಗೌಡ,ಶಾಮಾ ತಾಜ್, ಮಂಜುನಾಥ್, ಶಾಹಿನ್ ತಾಜ್, ಭಾಗ್ಯಮ್ಮ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವ್ಯೆ. ಶಿವಕುಮಾರ್, ಮಾಲೂರು ಪುರಸಭೆ ಅಧ್ಯಕ್ಷೆ ಕೋಮಲ, ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಮುಂತಾದವರು ಭಾಗವಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago