Categories: ಕೋಲಾರ

ಪೌರಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸಿಎಂನೊಂದಿಗೆ ಚರ್ಚೆ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ :ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯೊಂದಿಗೆ ಚರ್ಚೆ ನೆಡೆಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಪೌರಕಾರ್ಮಿಕರು ಕೋಲಾರ ಜನತೆಯ ಪೌಷ್ಟಿಕಾಂಶ ಇದ್ದಂತೆ ಅವರು ಯಾವುದೇ ಜಾತಿ, ಧರ್ಮ, ಬಡವ, ಶ್ರೀಮಂತ ಎನ್ನದೇ ಎಲ್ಲರ ಮನೆಯ ಮುಂದೆ ಸ್ವಚ್ಚತೆ ಮಾಡಿ ನಮ್ಮ ಆರೋಗ್ಯ ಕಾಪಾಡಿದ್ದಾರೆ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಪೌರಕಾರ್ಮಿಕರ ಒಳಿತಿಗಾಗಿ ಸದಾ ಶ್ರಮಿಸಲು ನಾನು ಸಿದ್ಧ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರುವ ಕಡತಗಳನ್ನು ಸರ್ಕಾರಕ್ಕೆ ರವಾನಿಸಲು ಶೀಘ್ರದಲ್ಲೇ ಮಾಡುತ್ತೇನೆ ಕಾರ್ಮಿಕರಿಗೆ ನಿವೇಶನ ಮತ್ತು ಮನೆಗಳ ನಿರ್ಮಾಣಕ್ಕೆ ನಾವು ಸಿದ್ದವಿದ್ದು ಪೌರಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎರಡು ತಿಂಗಳಿಗೊಮ್ಮೆ ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಸಭೆ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಪೌರಕಾರ್ಮಿಕರ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ದೇನೆ. ಪೌರಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ನೀಡಲು ಒತ್ತಾಯಿಸಿದ್ದೇನೆ. ಖಾಯಂ ನೌಕರರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ ಯಾಕೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಇಂದಿಗೂ ಎಷ್ಟೋ ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೇ ಮಲಹೊರುವ ಪದ್ದತಿ ಇದೆ ಪೌರಕಾರ್ಮಿಕರೇ ಆ ಕೆಲಸ ಮಾಡುತ್ತಿರುವುದು ಅಮಾನವೀಯ ಎನಿಸುತ್ತದೆ ಎಂದು ವಿಷಾದಿಸಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಮಾತನಾಡಿ, ಪೌರ ಕಾರ್ಮಿಕರು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತಿರುವ ಯೋಧರು, ಅವರು ಮುಂಜಾನೆ ನಗರವನ್ನು ಶುಚಿಗೊಳಿಸಿ ನಮ್ಮನ್ನು ಶುಚಿಗೊಳಿಸಿ ರಕ್ಷಣೆ ಮಾಡುತ್ತಿದ್ದಾರೆ ಪೌರಕಾರ್ಮಿಕರಿಗೆ ಸೇರಬೇಕಾದ ಸೌಲಭ್ಯಗಳನ್ನು ಅತಿ ಶೀಘ್ರದಲ್ಲೇ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಸಭೆಯಿಂದ ಹೊರವಲಯದ ಬಾರಂಡಹಳ್ಳಿ ಸಮೀಪ ನಿವೇಶನ ನೀಡಿ ಮನೆ ಕಟ್ಟಿಸಿಕೊಂಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮನೆಗಳ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರಸಭೆ ಸದಸ್ಯ ಪ್ರಸಾದ್ ಬಾಬು ಮಾತನಾಡಿ, ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ, ಅವರಿಗೆ ಅದು ತಲುಪುವ ತನಕ ವೇದಿಕೆ ಏರುವುದಿಲ್ಲ ಎಂದು ಪ್ರತಿರೋಧ ತೋರುವ ಮೂಲಕ ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿದರು.

ಇದಕ್ಕೂ ಮುನ್ನ ಪೌರಕಾರ್ಮಿಕರು ನಗರದ ಬಂಗಾರಪೇಟೆ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತದನಂತರ ಗಾಂಧಿವನದ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂ.ಜಿ. ರಸ್ತೆ ಮೂಲಕ ರಂಗಮಂದಿರವರೆಗೆ ಕಾರ್ಮಿಕರು ಹಾಗೂ ನಗರಸಭೆ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕುಣಿದು ಕುಪ್ಪಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸಂಗೀತಾ. ಪೌರಾಯುಕ್ತೆ ಅಂಬಿಕಾ, ಸದಸ್ಯರಾದ ರಾಕೇಶ್, ಅಂಬರೀಷ್, ಮುರಳಿಗೌಡ, ಸುರೇಶ್ ಬಾಬು, ಗುಣಶೇಖರ್, ಅಫ್ಸರ್, .ಪ್ರವೀಣ್ ಗೌಡ,ಶಾಮಾ ತಾಜ್, ಮಂಜುನಾಥ್, ಶಾಹಿನ್ ತಾಜ್, ಭಾಗ್ಯಮ್ಮ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವ್ಯೆ. ಶಿವಕುಮಾರ್, ಮಾಲೂರು ಪುರಸಭೆ ಅಧ್ಯಕ್ಷೆ ಕೋಮಲ, ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಮುಂತಾದವರು ಭಾಗವಸಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago