Categories: ಕೋಲಾರ

ಪೌರಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಸಿಎಂನೊಂದಿಗೆ ಚರ್ಚೆ ಶಾಸಕ ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ :ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯೊಂದಿಗೆ ಚರ್ಚೆ ನೆಡೆಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ಪೌರಕಾರ್ಮಿಕರು ಕೋಲಾರ ಜನತೆಯ ಪೌಷ್ಟಿಕಾಂಶ ಇದ್ದಂತೆ ಅವರು ಯಾವುದೇ ಜಾತಿ, ಧರ್ಮ, ಬಡವ, ಶ್ರೀಮಂತ ಎನ್ನದೇ ಎಲ್ಲರ ಮನೆಯ ಮುಂದೆ ಸ್ವಚ್ಚತೆ ಮಾಡಿ ನಮ್ಮ ಆರೋಗ್ಯ ಕಾಪಾಡಿದ್ದಾರೆ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಪೌರಕಾರ್ಮಿಕರ ಒಳಿತಿಗಾಗಿ ಸದಾ ಶ್ರಮಿಸಲು ನಾನು ಸಿದ್ಧ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರುವ ಕಡತಗಳನ್ನು ಸರ್ಕಾರಕ್ಕೆ ರವಾನಿಸಲು ಶೀಘ್ರದಲ್ಲೇ ಮಾಡುತ್ತೇನೆ ಕಾರ್ಮಿಕರಿಗೆ ನಿವೇಶನ ಮತ್ತು ಮನೆಗಳ ನಿರ್ಮಾಣಕ್ಕೆ ನಾವು ಸಿದ್ದವಿದ್ದು ಪೌರಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎರಡು ತಿಂಗಳಿಗೊಮ್ಮೆ ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಸಭೆ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಪೌರಕಾರ್ಮಿಕರ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ದೇನೆ. ಪೌರಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ನೀಡಲು ಒತ್ತಾಯಿಸಿದ್ದೇನೆ. ಖಾಯಂ ನೌಕರರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ ಯಾಕೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಇಂದಿಗೂ ಎಷ್ಟೋ ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೇ ಮಲಹೊರುವ ಪದ್ದತಿ ಇದೆ ಪೌರಕಾರ್ಮಿಕರೇ ಆ ಕೆಲಸ ಮಾಡುತ್ತಿರುವುದು ಅಮಾನವೀಯ ಎನಿಸುತ್ತದೆ ಎಂದು ವಿಷಾದಿಸಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಮಾತನಾಡಿ, ಪೌರ ಕಾರ್ಮಿಕರು ನಮ್ಮ ಆರೋಗ್ಯ ರಕ್ಷಣೆ ಮಾಡುತ್ತಿರುವ ಯೋಧರು, ಅವರು ಮುಂಜಾನೆ ನಗರವನ್ನು ಶುಚಿಗೊಳಿಸಿ ನಮ್ಮನ್ನು ಶುಚಿಗೊಳಿಸಿ ರಕ್ಷಣೆ ಮಾಡುತ್ತಿದ್ದಾರೆ ಪೌರಕಾರ್ಮಿಕರಿಗೆ ಸೇರಬೇಕಾದ ಸೌಲಭ್ಯಗಳನ್ನು ಅತಿ ಶೀಘ್ರದಲ್ಲೇ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಸಭೆಯಿಂದ ಹೊರವಲಯದ ಬಾರಂಡಹಳ್ಳಿ ಸಮೀಪ ನಿವೇಶನ ನೀಡಿ ಮನೆ ಕಟ್ಟಿಸಿಕೊಂಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮನೆಗಳ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರಸಭೆ ಸದಸ್ಯ ಪ್ರಸಾದ್ ಬಾಬು ಮಾತನಾಡಿ, ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಿಲ್ಲ, ಅವರಿಗೆ ಅದು ತಲುಪುವ ತನಕ ವೇದಿಕೆ ಏರುವುದಿಲ್ಲ ಎಂದು ಪ್ರತಿರೋಧ ತೋರುವ ಮೂಲಕ ಪೌರಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿದರು.

ಇದಕ್ಕೂ ಮುನ್ನ ಪೌರಕಾರ್ಮಿಕರು ನಗರದ ಬಂಗಾರಪೇಟೆ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ತದನಂತರ ಗಾಂಧಿವನದ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂ.ಜಿ. ರಸ್ತೆ ಮೂಲಕ ರಂಗಮಂದಿರವರೆಗೆ ಕಾರ್ಮಿಕರು ಹಾಗೂ ನಗರಸಭೆ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕುಣಿದು ಕುಪ್ಪಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸಂಗೀತಾ. ಪೌರಾಯುಕ್ತೆ ಅಂಬಿಕಾ, ಸದಸ್ಯರಾದ ರಾಕೇಶ್, ಅಂಬರೀಷ್, ಮುರಳಿಗೌಡ, ಸುರೇಶ್ ಬಾಬು, ಗುಣಶೇಖರ್, ಅಫ್ಸರ್, .ಪ್ರವೀಣ್ ಗೌಡ,ಶಾಮಾ ತಾಜ್, ಮಂಜುನಾಥ್, ಶಾಹಿನ್ ತಾಜ್, ಭಾಗ್ಯಮ್ಮ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವ್ಯೆ. ಶಿವಕುಮಾರ್, ಮಾಲೂರು ಪುರಸಭೆ ಅಧ್ಯಕ್ಷೆ ಕೋಮಲ, ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಮುಂತಾದವರು ಭಾಗವಸಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

5 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

17 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

18 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

19 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

19 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago