ಪೌರ ಕಾರ್ಮಿಕರ ದಿನಾಚರಣೆ: ದೊಡ್ಡಬಳ್ಳಾಪುರ ನಗರಸಭೆ ಗ್ರೇಡ್ 1 ನಗರಸಭೆಯಾದರೆ, ಗುತ್ತಿಗೆ ಪೌರಕಾರ್ಮಿಕರು ಖಾಯಂ ಆಗಲು ಸಹಕಾರಿ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ನಗರಸಭೆಯನ್ನು ಗ್ರೇಡ್ 1 ನಗರಸಭೆಯನ್ನಾಗಿಸಲು ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದ್ದು, ಇದರಿಂದ ನಗರದ ಅಭಿವೃದ್ಧಿಯ ಲಾಭ ಪೌರಕಾರ್ಮಿಕರಿಗೂ ದೊರಕುತ್ತದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರಸಭೆ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂದಿರದಲ್ಲಿ ನಗರಸಭೆ ಹಾಗೂ ಪೌರಸೇವಾ ನೌಕರರ ಸೇವಾ ಸಂಘದ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರೇಡ್ 1 ನಗರಸಭೆಯಾಗಿ ಮಾರ್ಪಟ್ಟರೆ ಹೆಚ್ಚಿನ ಅನುದಾನ ದೊರೆಯುವುದರೊಂದಿಗೆ ಗುತ್ತಿಗೆ ಪೌರಕಾರ್ಮಿಕರು ಖಾಯಂ ಆಗಲು ಸಹಕಾರಿಯಾಗಲಿದೆ. ಸರ್ಕಾರ ಪೌರ ಕಾರ್ಮಿಕರಿಗೆ 34 ಮನೆಗಳನ್ನು ನಿರ್ಮಿಸಿಕೊಡಲಾಗುತ್ತಿದ್ದು, ಈ ಪ್ರದೇಶದಲ್ಲಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಲಾಗುವುದು. ಪೌರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿರುವ ಪ್ರದೇಶಗಳಲ್ಲಿ ಕೊಳಗೇರಿ ಅಭಿವೃದ್ದಿ ಮಂಡಲಿಯಿಂದ ಹೆಚ್ಚಿನ ಅನುದಾನ ತಂದು ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯ ಸರ್ಕಾರದಿಂದ ಪೌರ ಕಾರ್ಮಿಕರಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ನಗರಕ್ಕೆ ತರುವ ಮೂಲಕ ಕಾರ್ಯ ನಿರ್ವಹಿಸಲಾಗುವುದು ಎಂದರು.

ನಗರಸಭೆಯ ಶೇ. 24ರಷ್ಟು ಅನುದಾನದ ಕಾಮಗಾರಿಗಳಿಗೆ ಶೀಘ್ರ ಟೆಂಡರ್ ಕರೆಯುವಂತೆ ಸೂಚಿಸಲಾಗಿದೆ. ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಸಮಾಜದ ಮುಖ್ಯ ಭಾಗವಾಗಿದ್ದಾರೆ. ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯ ನಿರ್ವಹಿಸಿಸಿ ಜನರ ವಿಶ್ವಾಸ ಗಳಿಸಬೇಕಿದೆ ಎಂದರು.

ಪೌರ ಸೇವಾ ನೌಕರರ ಸೇವಾ ಸಂಘದ ನಗರ ಶಾಖೆ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ಪೌರಕಾರ್ಮಿಕರ ಖಾಯಂ ಮಾಡಿರುವುದು ಸ್ವಾಗತಾರ್ಹವಾಗಿದೆ. ಪೌರಕಾರ್ಮಿಕರು ಇಂದಿನ ಸವಲತ್ತುಗಳನ್ನು ಪಡೆಯಲು ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಬೇಕಿದೆ. ಆದರೆ, ಗುತ್ತಿಗೆ ಕಾರ್ಮಿಕರಿಗೆ ಖಾಯಂ ಕಾರ್ಮಿಕರಿಗೆ ಇದ್ದಂತೆ ರಜೆ, ಮೊದಲಾದ ಸೌಲಭ್ಯಗಳು ಇಲ್ಲ. ಕಾಯಿಲೆ ಬಂದು ರಜೆ ಹಾಕಿದರೂ ಸಂಬಳ ಕಡಿತ ಮಾಡಲಾಗುತ್ತಿದೆ. ನಮ್ಮ ಸರಿಸಮಾನವಾಗಿ ಕೆಲಸ ಮಾಡುವ ಗುತ್ತಿಗೆ ಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕು. ಬಾಕಿ ಇರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಪೌರ ಸೇವಾ ನೌಕರರ ಸೇವಾ ಸಂಘಕ್ಕೆ ಕೊಠಡಿಯನ್ನು ನೀಡಬೇಕಿದೆ ಎಂದು ಮನವಿ ಮಾಡಿದರು.

ಪರಿಸರ ವಿಭಾಗದ ಸಹಾಯಕ ಅಭಿಯಂತರ ಈರಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಬಸವಲಿಂಗಪ್ಪ ಅವರು ಸಚಿವರಾಗಿದ್ದಾಗ ಮಲಹೊರುವ ಪದ್ದತಿಯನ್ನು ನಿಷೇಧಿಸಿದರು, ಪೌರಕಕಾರ್ಮಿಕರಿಗೆ ಆತ್ಮ ವಿಶ್ವಾಸ ಹಾಗೂ ಮನೋಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅವರಿಗಾಗಿ ಒಂದು ದಿನಾಚರಣೆಯ ಔಚಿತ್ಯ ಇದೆ ಎನ್ನುವುದನ್ನು ಮನಗಂಡು 2007ರಿಂದ ಸೆ.23ರಂದು ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತಿದೆ. ಪೌರಕಾರ್ಮಿಕರಿಗೆ ವಿಶೇಷ ಭತ್ಯೆಗಳನ್ನು ನೀಡುವುದರೊಂದಿಗೆ, ಮನೆ ನಿರ್ಮಾಣಕ್ಕೆ ತಗುಲುವ 7.5 ಲಕ್ಷ ರೂಗಳಲ್ಲಿ 6 ಲಕ್ಷ ರೂಗಳ ಸಹಾಯಧನ ನೀಡಲಾಗುತ್ತಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್, ಸ್ಥಾಯಿ ಸಮಿತಿ ನಿಕಟ ಪೂರ್ವ ಅಧ್ಯಕ್ಷ ವಿ.ಎಸ್.ರವಿಕುಮಾರ್, ಜಿಲ್ಲಾ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪಾಂಡು ಸಿಂಧೆ, ಖಜಾಂಚಿ ವೆಂಕಟೇಶ ಬಾಬು ಸೇರಿದಂತೆ ನಗರಸಭಾ ಸದಸ್ಯರು, ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

15 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago