ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಆದೇಶದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.

ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾಧ್ಯಕ್ಷ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಪಾಂಡುಸಿಂಧೆ ಮಾತನಾಡಿ, ಪೌರಕಾರ್ಮಿಕರು ಪ್ರತಿನಿತ್ಯವೂ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸ್ಪಂದಿಸುತ್ತೇನೆ. ಸರ್ಕಾರದಿಂದ ದೊರೆಯುವಂತ ಪ್ರತಿಯೊಂದು ಸೌಲಭ್ಯಗಳನ್ನು ಪ್ರತಿಯೊಬ್ಬ ಪೌರನೌಕರರಿಗೂ ತಲುಪುವಂತೆ ನೋಡಿಕೊಳ್ಳಲಾಗಿವುದು. ನೌಕರರು ಸಮಸ್ಯೆಗಳನ್ನ ತಿಳಿಸಿದರೆ ಸೂಕ್ತ ಕ್ರಮವಹಿಸಲಾಗುವುದು ಎಂದರು.

ನೂತನ ಪದಾಧಿಕಾರಿಗಳು:

ಜಿಲ್ಲಾ ಅಧ್ಯಕ್ಷ -ಡಾ. ಪಿ. ಪಾಂಡುಸಿಂಧೆ, ಲೆಕ್ಕಾಧಿಕಾರಿ ನಗರಸಭೆ, ದೊಡ್ಡಬಳ್ಳಾಪುರ.
ಕಾರ್ಯದರ್ಶಿ – ಆರ್.ಐ ಗೋವಿಂದರಾಜು, ನಗರಸಭೆ, ದೊಡ್ಡಬಳ್ಳಾಪುರ.
ಉಪಾಧ್ಯಕ್ಷ – ಚಂದ್ರಶೇಖರ್, ನೆಲಮಂಗಲ.
ಖಜಾಂಚಿ – ಸಾಹಿದಾ, ಮ್ಯಾನೇಜರ್ ದೊಡ್ಡಬಳ್ಳಾಪುರ.
ರಾಜ್ಯ ಪರಿಷತ್ ಸದಸ್ಯ – ಉಮಾಶಂಕರ್, ಬಾಶೆಟ್ಟಿಹಳ್ಳಿ.
ನಿರ್ದೇಶಕರಾಗಿ ಜಿಲ್ಲಾ ಯೋಜನಾ ನಿರ್ದೇಶಕರ ಕಚೇರಿಯಿಂದ ವೆಂಕಟೇಶ್, ಸುರೇಶ್, ಹೊಸಕೋಟೆಯ ಮಂಜುನಾಥ( ವಾಟರ್ ಮ್ಯಾನ್) ಶಿವಕುಮಾರ, (ಪೌರಕಾರ್ಮಿಕ), ವಿಜಯಪುರದ ಅಜ್ಮತ್ ಉಲ್ಲಾ,(ಎಲೆಕ್ಟ್ರಿಕಲ್), ಲಾವಣ್ಯ( ಎಸ್ಎಚ್ಐ) ದೇವನಹಳ್ಳಿಯ ಎಂ. ನಾರಾಯಣಸ್ವಾಮಿ, ಶ್ರೀದೇವಿ( ಎಸ್ಎಚ್ಐ),
ಬಾಶೆಟ್ಟಿಹಳ್ಳಿಯ ಕೀರ್ತಿಲೇಖಾ( ಜೆಎಚ್ಐ),
ನೆಲಮಂಗಲದ ಬಿಜಿ ಸುಲೋಚನ(ಎಸ್ಎಚ್ಐ), ಉಮಾಶಂಕರ್( ಎಫ್.ಡಿಎ) ಶೋಭಾ (ಎಸ್ಎಚ್ಐ) ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ತಾಲ್ಲೂಕು ಪೌರಕಾರ್ಮಿಕರ ಘಟಕದಿಂದ ಅಭಿನಂದಿಸಿದರು.

Ramesh Babu

Journalist

Recent Posts

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

4 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

5 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

5 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

8 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

10 hours ago