ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಆದೇಶದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.
ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾಧ್ಯಕ್ಷ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಪಾಂಡುಸಿಂಧೆ ಮಾತನಾಡಿ, ಪೌರಕಾರ್ಮಿಕರು ಪ್ರತಿನಿತ್ಯವೂ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸ್ಪಂದಿಸುತ್ತೇನೆ. ಸರ್ಕಾರದಿಂದ ದೊರೆಯುವಂತ ಪ್ರತಿಯೊಂದು ಸೌಲಭ್ಯಗಳನ್ನು ಪ್ರತಿಯೊಬ್ಬ ಪೌರನೌಕರರಿಗೂ ತಲುಪುವಂತೆ ನೋಡಿಕೊಳ್ಳಲಾಗಿವುದು. ನೌಕರರು ಸಮಸ್ಯೆಗಳನ್ನ ತಿಳಿಸಿದರೆ ಸೂಕ್ತ ಕ್ರಮವಹಿಸಲಾಗುವುದು ಎಂದರು.
ನೂತನ ಪದಾಧಿಕಾರಿಗಳು:
ಜಿಲ್ಲಾ ಅಧ್ಯಕ್ಷ -ಡಾ. ಪಿ. ಪಾಂಡುಸಿಂಧೆ, ಲೆಕ್ಕಾಧಿಕಾರಿ ನಗರಸಭೆ, ದೊಡ್ಡಬಳ್ಳಾಪುರ.
ಕಾರ್ಯದರ್ಶಿ – ಆರ್.ಐ ಗೋವಿಂದರಾಜು, ನಗರಸಭೆ, ದೊಡ್ಡಬಳ್ಳಾಪುರ.
ಉಪಾಧ್ಯಕ್ಷ – ಚಂದ್ರಶೇಖರ್, ನೆಲಮಂಗಲ.
ಖಜಾಂಚಿ – ಸಾಹಿದಾ, ಮ್ಯಾನೇಜರ್ ದೊಡ್ಡಬಳ್ಳಾಪುರ.
ರಾಜ್ಯ ಪರಿಷತ್ ಸದಸ್ಯ – ಉಮಾಶಂಕರ್, ಬಾಶೆಟ್ಟಿಹಳ್ಳಿ.
ನಿರ್ದೇಶಕರಾಗಿ ಜಿಲ್ಲಾ ಯೋಜನಾ ನಿರ್ದೇಶಕರ ಕಚೇರಿಯಿಂದ ವೆಂಕಟೇಶ್, ಸುರೇಶ್, ಹೊಸಕೋಟೆಯ ಮಂಜುನಾಥ( ವಾಟರ್ ಮ್ಯಾನ್) ಶಿವಕುಮಾರ, (ಪೌರಕಾರ್ಮಿಕ), ವಿಜಯಪುರದ ಅಜ್ಮತ್ ಉಲ್ಲಾ,(ಎಲೆಕ್ಟ್ರಿಕಲ್), ಲಾವಣ್ಯ( ಎಸ್ಎಚ್ಐ) ದೇವನಹಳ್ಳಿಯ ಎಂ. ನಾರಾಯಣಸ್ವಾಮಿ, ಶ್ರೀದೇವಿ( ಎಸ್ಎಚ್ಐ),
ಬಾಶೆಟ್ಟಿಹಳ್ಳಿಯ ಕೀರ್ತಿಲೇಖಾ( ಜೆಎಚ್ಐ),
ನೆಲಮಂಗಲದ ಬಿಜಿ ಸುಲೋಚನ(ಎಸ್ಎಚ್ಐ), ಉಮಾಶಂಕರ್( ಎಫ್.ಡಿಎ) ಶೋಭಾ (ಎಸ್ಎಚ್ಐ) ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ತಾಲ್ಲೂಕು ಪೌರಕಾರ್ಮಿಕರ ಘಟಕದಿಂದ ಅಭಿನಂದಿಸಿದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…