ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಆದೇಶದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.
ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾಧ್ಯಕ್ಷ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಪಾಂಡುಸಿಂಧೆ ಮಾತನಾಡಿ, ಪೌರಕಾರ್ಮಿಕರು ಪ್ರತಿನಿತ್ಯವೂ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸ್ಪಂದಿಸುತ್ತೇನೆ. ಸರ್ಕಾರದಿಂದ ದೊರೆಯುವಂತ ಪ್ರತಿಯೊಂದು ಸೌಲಭ್ಯಗಳನ್ನು ಪ್ರತಿಯೊಬ್ಬ ಪೌರನೌಕರರಿಗೂ ತಲುಪುವಂತೆ ನೋಡಿಕೊಳ್ಳಲಾಗಿವುದು. ನೌಕರರು ಸಮಸ್ಯೆಗಳನ್ನ ತಿಳಿಸಿದರೆ ಸೂಕ್ತ ಕ್ರಮವಹಿಸಲಾಗುವುದು ಎಂದರು.
ನೂತನ ಪದಾಧಿಕಾರಿಗಳು:
ಜಿಲ್ಲಾ ಅಧ್ಯಕ್ಷ -ಡಾ. ಪಿ. ಪಾಂಡುಸಿಂಧೆ, ಲೆಕ್ಕಾಧಿಕಾರಿ ನಗರಸಭೆ, ದೊಡ್ಡಬಳ್ಳಾಪುರ.
ಕಾರ್ಯದರ್ಶಿ – ಆರ್.ಐ ಗೋವಿಂದರಾಜು, ನಗರಸಭೆ, ದೊಡ್ಡಬಳ್ಳಾಪುರ.
ಉಪಾಧ್ಯಕ್ಷ – ಚಂದ್ರಶೇಖರ್, ನೆಲಮಂಗಲ.
ಖಜಾಂಚಿ – ಸಾಹಿದಾ, ಮ್ಯಾನೇಜರ್ ದೊಡ್ಡಬಳ್ಳಾಪುರ.
ರಾಜ್ಯ ಪರಿಷತ್ ಸದಸ್ಯ – ಉಮಾಶಂಕರ್, ಬಾಶೆಟ್ಟಿಹಳ್ಳಿ.
ನಿರ್ದೇಶಕರಾಗಿ ಜಿಲ್ಲಾ ಯೋಜನಾ ನಿರ್ದೇಶಕರ ಕಚೇರಿಯಿಂದ ವೆಂಕಟೇಶ್, ಸುರೇಶ್, ಹೊಸಕೋಟೆಯ ಮಂಜುನಾಥ( ವಾಟರ್ ಮ್ಯಾನ್) ಶಿವಕುಮಾರ, (ಪೌರಕಾರ್ಮಿಕ), ವಿಜಯಪುರದ ಅಜ್ಮತ್ ಉಲ್ಲಾ,(ಎಲೆಕ್ಟ್ರಿಕಲ್), ಲಾವಣ್ಯ( ಎಸ್ಎಚ್ಐ) ದೇವನಹಳ್ಳಿಯ ಎಂ. ನಾರಾಯಣಸ್ವಾಮಿ, ಶ್ರೀದೇವಿ( ಎಸ್ಎಚ್ಐ),
ಬಾಶೆಟ್ಟಿಹಳ್ಳಿಯ ಕೀರ್ತಿಲೇಖಾ( ಜೆಎಚ್ಐ),
ನೆಲಮಂಗಲದ ಬಿಜಿ ಸುಲೋಚನ(ಎಸ್ಎಚ್ಐ), ಉಮಾಶಂಕರ್( ಎಫ್.ಡಿಎ) ಶೋಭಾ (ಎಸ್ಎಚ್ಐ) ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ತಾಲ್ಲೂಕು ಪೌರಕಾರ್ಮಿಕರ ಘಟಕದಿಂದ ಅಭಿನಂದಿಸಿದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…