ಪೌಷ್ಠಿಕಾಂಶ ಆಹಾರ ಸೇವನೆಯಿಂದ ಉತ್ತಮ‌ ಆರೋಗ್ಯ ವೃದ್ಧಿ- ಮೊಳಕೆಕಾಳುಗಳ ಮಹತ್ವ ಸಾರಿದ ನ್ಯಾಷನಲ್ ಪ್ರೈಡ್ ಸ್ಕೂಲ್

ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.

ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್‌ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.

ವಿದ್ಯಾರ್ಥಿಗಳು ವಿವಿಧ ಬಗೆಯ ಮೊಳಕೆಕಾಳು ಗಳನ್ನು ತಮ್ಮ ತಮ್ಮ ಮನೆಗಳಿಂದ ತಂದಿದ್ದರು, ಮೊಳಕೆಕಾಳುಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ವಿವಿಧ ಬಗೆಯ ತಿಂಡಿಗಳನ್ನು ತಯಾರಿಸಲಾಗಿತ್ತು.

ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಯವರಾದ ಸತೀಶ್ ರಾಜ್ ರವರು, ಮುಖ್ಯೋಪಾಧ್ಯಾಯನಿಯಾದ ರಶ್ಮಿ ಸತೀಶ್ ರಾಜ್ ರವರು. ಶಾಲೆಯ ಕಾರ್ಯನಿರ್ವಾಹಕರಾದ ಬಿಂದು ರವರು ಹಾಗೂ ಎಲ್ಲಾ ಉಪಾಧ್ಯಾಯಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

5 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

9 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

10 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

11 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

12 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

15 hours ago