ಪೌಷ್ಠಿಕಾಂಶ ಆಹಾರ ಸೇವನೆಯಿಂದ ಉತ್ತಮ‌ ಆರೋಗ್ಯ ವೃದ್ಧಿ- ಮೊಳಕೆಕಾಳುಗಳ ಮಹತ್ವ ಸಾರಿದ ನ್ಯಾಷನಲ್ ಪ್ರೈಡ್ ಸ್ಕೂಲ್

ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.

ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್‌ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.

ವಿದ್ಯಾರ್ಥಿಗಳು ವಿವಿಧ ಬಗೆಯ ಮೊಳಕೆಕಾಳು ಗಳನ್ನು ತಮ್ಮ ತಮ್ಮ ಮನೆಗಳಿಂದ ತಂದಿದ್ದರು, ಮೊಳಕೆಕಾಳುಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ವಿವಿಧ ಬಗೆಯ ತಿಂಡಿಗಳನ್ನು ತಯಾರಿಸಲಾಗಿತ್ತು.

ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಯವರಾದ ಸತೀಶ್ ರಾಜ್ ರವರು, ಮುಖ್ಯೋಪಾಧ್ಯಾಯನಿಯಾದ ರಶ್ಮಿ ಸತೀಶ್ ರಾಜ್ ರವರು. ಶಾಲೆಯ ಕಾರ್ಯನಿರ್ವಾಹಕರಾದ ಬಿಂದು ರವರು ಹಾಗೂ ಎಲ್ಲಾ ಉಪಾಧ್ಯಾಯಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

3 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

16 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

18 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

18 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

23 hours ago