ಪೌಷ್ಠಿಕಾಂಶ ಆಹಾರ ಸೇವನೆಯಿಂದ ಉತ್ತಮ‌ ಆರೋಗ್ಯ ವೃದ್ಧಿ- ಮೊಳಕೆಕಾಳುಗಳ ಮಹತ್ವ ಸಾರಿದ ನ್ಯಾಷನಲ್ ಪ್ರೈಡ್ ಸ್ಕೂಲ್

ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.

ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್‌ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.

ವಿದ್ಯಾರ್ಥಿಗಳು ವಿವಿಧ ಬಗೆಯ ಮೊಳಕೆಕಾಳು ಗಳನ್ನು ತಮ್ಮ ತಮ್ಮ ಮನೆಗಳಿಂದ ತಂದಿದ್ದರು, ಮೊಳಕೆಕಾಳುಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ವಿವಿಧ ಬಗೆಯ ತಿಂಡಿಗಳನ್ನು ತಯಾರಿಸಲಾಗಿತ್ತು.

ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಯವರಾದ ಸತೀಶ್ ರಾಜ್ ರವರು, ಮುಖ್ಯೋಪಾಧ್ಯಾಯನಿಯಾದ ರಶ್ಮಿ ಸತೀಶ್ ರಾಜ್ ರವರು. ಶಾಲೆಯ ಕಾರ್ಯನಿರ್ವಾಹಕರಾದ ಬಿಂದು ರವರು ಹಾಗೂ ಎಲ್ಲಾ ಉಪಾಧ್ಯಾಯಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago