ಪೌಷ್ಠಿಕಾಂಶ ಆಹಾರ ಸೇವನೆಯಿಂದ ಉತ್ತಮ‌ ಆರೋಗ್ಯ ವೃದ್ಧಿ- ಮೊಳಕೆಕಾಳುಗಳ ಮಹತ್ವ ಸಾರಿದ ನ್ಯಾಷನಲ್ ಪ್ರೈಡ್ ಸ್ಕೂಲ್

ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು.

ಶಾಲೆಯ ಅವರಣದಲ್ಲಿ ಮೊಳಕೆಕಾಳಿನ ದಿನಾಚರಣೆಯನ್ನ ಅಯೋಜನೆ ಮಾಡಲಾಗಿದ್ದು, ವಿಶೇಷವಾಗಿ ಪ್ರಿ-ಸ್ಕೂಲ್‌ನ ಪುಟಾಣಿ ಮಕ್ಕಳಿಗಾಗಿ ಮೊಳಕೆಕಾಳಿನ (Spourts day) ದಿನಾಚರಣೆಯ ಮಹತ್ವವನ್ನ ನುರಿತ ಶಿಕ್ಷಕರು ತಿಳಿಸಿಕೊಟ್ಟರು.

ವಿದ್ಯಾರ್ಥಿಗಳು ವಿವಿಧ ಬಗೆಯ ಮೊಳಕೆಕಾಳು ಗಳನ್ನು ತಮ್ಮ ತಮ್ಮ ಮನೆಗಳಿಂದ ತಂದಿದ್ದರು, ಮೊಳಕೆಕಾಳುಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ವಿವಿಧ ಬಗೆಯ ತಿಂಡಿಗಳನ್ನು ತಯಾರಿಸಲಾಗಿತ್ತು.

ಮೊಳಕೆ, ತುರಿದ ಕ್ಯಾರೆಟ್, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು, ದಾಳಿಂಬೆ, ನಿಂಬೆ ಮತ್ತು ಉಪ್ಪಿನೊಂದಿಗೆ ರುಚಿಕರವಾದ ಮೊಳಕೆ ಸಲಾಡ್ ಮಾಡುವ ಬಗ್ಗೆ ಶಿಕ್ಷಕರು ವಿವರಿಸಿದರು. ಆನಂತರ ಮಕ್ಕಳು ರುಚಿಕರವಾದ ಮೊಳಕೆಕಾಳುಗಳನ್ನ ತಿಂದು ಆನಂದಿಸಿದರು. ಆರೋಗ್ಯಕರ ಆಹಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಈ ಚಟುವಟಿಕೆಯನ್ನು ನಡೆಸಲಾಯಿತು. ಆರೋಗ್ಯಕರ ಆಹಾರ ಸೇವನೆಯ ಅಗತ್ಯತೆ ಮತ್ತು ಆಹಾರದ ನಾರಿನಂಶದಿಂದ ಸಮೃದ್ಧವಾಗಿರುವ ಮೊಳಕೆಕಾಳುಗಳ ಮಹತ್ವವನ್ನು ಶಿಕ್ಷಕರು ಮಕ್ಕಳಿಗೆ ಕಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಯವರಾದ ಸತೀಶ್ ರಾಜ್ ರವರು, ಮುಖ್ಯೋಪಾಧ್ಯಾಯನಿಯಾದ ರಶ್ಮಿ ಸತೀಶ್ ರಾಜ್ ರವರು. ಶಾಲೆಯ ಕಾರ್ಯನಿರ್ವಾಹಕರಾದ ಬಿಂದು ರವರು ಹಾಗೂ ಎಲ್ಲಾ ಉಪಾಧ್ಯಾಯಿನಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago