ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪಯಣ ಬೆಳೆಸಿದ ರಾಹುಲ್ ಗಾಂಧಿ: ತನ್ನ ತಂದೆ ಹುಟ್ಟುಹಬ್ಬ ಆಚರಿಸಲು ಹೊರಟ ರಾಹುಲ್ ಗಾಂಧಿ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ದೇಶದಲ್ಲಿ ಸಂಚಲನ ಮೂಡಿಸಿದ್ದ ರಾಹುಲ್ ಗಾಂಧಿ. ಇದೀಗ ಯುದ್ಧ ಭೂಮಿಯತ್ತ ಬೈಕ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಜಮ್ಮು ಕಾಶ್ಮೀರದ ಪೂರ್ವ ಲಡಾಖ್‌ನ ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪ್ರಯಾಣ ಬೆಳೆಸಿದರು, ಅಲ್ಲಿ ಅವರು ಪ್ರವಾಸಿ ಶಿಬಿರದಲ್ಲಿ ರಾತ್ರಿ ತಂಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ರಾಹುಲ್ ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾದ ಆಗಸ್ಟ್ 20 ರಂದು ಪ್ಯಾಂಗಾಂಗ್ ಸರೋವರದಲ್ಲಿ ಆಚರಿಸಲಿದ್ದಾರೆ. ಇದಕ್ಕೂ ಮುನ್ನಾ ಶುಕ್ರವಾರ ಲಡಾಖ್‌ಗೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಲೇಹ್‌ನಲ್ಲಿ 500 ಕ್ಕೂ ಹೆಚ್ಚು ಯುವಕರೊಂದಿಗೆ ಸಂವಾದ ನಡೆಸಿದರು. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿ ಇದಾಗಿದೆ.

ಎಲ್ಲಿದೆ ಗೊತ್ತಾ ಪ್ಯಾಂಗೊಂಗ್ ಸರೋವರ?

ಸುಮಾರು 4,350 ಮೀಟರ್ ಎತ್ತರದಲ್ಲಿರುವ ಪ್ಯಾಂಗೊಂಗ್ ಸರೋವರವು ವಿಶ್ವದ ಅತಿ ಎತ್ತರದ ಉಪ್ಪುನೀರಿನ ಸರೋವರವಾಗಿದೆ. ಅದರ ನೀರು, ನೀಲಿ ಬಣ್ಣದಿಂದ ಕಂಗೊಳಿಸುತ್ತದೆ, ಈ ಸರೋವರ ಸುಮಾರು 160 ಕಿಲೋಮೀಟರ್ ವರೆಗೆ ವಿಸ್ತರಿಸಿದೆ.

ಲೇಹ್ ಲಡಾಖ್‌ನ ಅತ್ಯಂತ ಪ್ರಸಿದ್ಧ ಸರೋವರಗಳಲ್ಲಿ ಒಂದಾದ ಪ್ಯಾಂಗೊಂಗ್ ಸರೋವರವು ಟಿಬೆಟಿಯನ್ ಪದವಾದ ಪ್ಯಾಂಗಾಂಗ್ ತ್ಸೋ ನಿಂದ ತನ್ನ ಹೆಸರನ್ನು ಪಡೆದುಕೊಂಡಿದೆ, ಇದರರ್ಥ ಎತ್ತರದ ಹುಲ್ಲುಗಾವಲು ಸರೋವರ. ನೀವು ಇಲ್ಲಿ ಗಂಟೆಗಟ್ಟಲೆ ಧ್ಯಾನಿಸಬಹುದು, ಪ್ಯಾಂಗೊಂಗ್ ಸರೋವರವು ವಿವಿಧ ಸಮಯಗಳಲ್ಲಿ ನೀಲಿ, ಹಸಿರು ಮತ್ತು ಕೆಂಪು ಬಣ್ಣಗಳಲ್ಲಿ ಬಣ್ಣಗಳನ್ನು ಬದಲಾಯಿಸುತ್ತದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago