ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪಯಣ ಬೆಳೆಸಿದ ರಾಹುಲ್ ಗಾಂಧಿ: ತನ್ನ ತಂದೆ ಹುಟ್ಟುಹಬ್ಬ ಆಚರಿಸಲು ಹೊರಟ ರಾಹುಲ್ ಗಾಂಧಿ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ದೇಶದಲ್ಲಿ ಸಂಚಲನ ಮೂಡಿಸಿದ್ದ ರಾಹುಲ್ ಗಾಂಧಿ. ಇದೀಗ ಯುದ್ಧ ಭೂಮಿಯತ್ತ ಬೈಕ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಜಮ್ಮು ಕಾಶ್ಮೀರದ ಪೂರ್ವ ಲಡಾಖ್‌ನ ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪ್ರಯಾಣ ಬೆಳೆಸಿದರು, ಅಲ್ಲಿ ಅವರು ಪ್ರವಾಸಿ ಶಿಬಿರದಲ್ಲಿ ರಾತ್ರಿ ತಂಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ರಾಹುಲ್ ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾದ ಆಗಸ್ಟ್ 20 ರಂದು ಪ್ಯಾಂಗಾಂಗ್ ಸರೋವರದಲ್ಲಿ ಆಚರಿಸಲಿದ್ದಾರೆ. ಇದಕ್ಕೂ ಮುನ್ನಾ ಶುಕ್ರವಾರ ಲಡಾಖ್‌ಗೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಲೇಹ್‌ನಲ್ಲಿ 500 ಕ್ಕೂ ಹೆಚ್ಚು ಯುವಕರೊಂದಿಗೆ ಸಂವಾದ ನಡೆಸಿದರು. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿ ಇದಾಗಿದೆ.

ಎಲ್ಲಿದೆ ಗೊತ್ತಾ ಪ್ಯಾಂಗೊಂಗ್ ಸರೋವರ?

ಸುಮಾರು 4,350 ಮೀಟರ್ ಎತ್ತರದಲ್ಲಿರುವ ಪ್ಯಾಂಗೊಂಗ್ ಸರೋವರವು ವಿಶ್ವದ ಅತಿ ಎತ್ತರದ ಉಪ್ಪುನೀರಿನ ಸರೋವರವಾಗಿದೆ. ಅದರ ನೀರು, ನೀಲಿ ಬಣ್ಣದಿಂದ ಕಂಗೊಳಿಸುತ್ತದೆ, ಈ ಸರೋವರ ಸುಮಾರು 160 ಕಿಲೋಮೀಟರ್ ವರೆಗೆ ವಿಸ್ತರಿಸಿದೆ.

ಲೇಹ್ ಲಡಾಖ್‌ನ ಅತ್ಯಂತ ಪ್ರಸಿದ್ಧ ಸರೋವರಗಳಲ್ಲಿ ಒಂದಾದ ಪ್ಯಾಂಗೊಂಗ್ ಸರೋವರವು ಟಿಬೆಟಿಯನ್ ಪದವಾದ ಪ್ಯಾಂಗಾಂಗ್ ತ್ಸೋ ನಿಂದ ತನ್ನ ಹೆಸರನ್ನು ಪಡೆದುಕೊಂಡಿದೆ, ಇದರರ್ಥ ಎತ್ತರದ ಹುಲ್ಲುಗಾವಲು ಸರೋವರ. ನೀವು ಇಲ್ಲಿ ಗಂಟೆಗಟ್ಟಲೆ ಧ್ಯಾನಿಸಬಹುದು, ಪ್ಯಾಂಗೊಂಗ್ ಸರೋವರವು ವಿವಿಧ ಸಮಯಗಳಲ್ಲಿ ನೀಲಿ, ಹಸಿರು ಮತ್ತು ಕೆಂಪು ಬಣ್ಣಗಳಲ್ಲಿ ಬಣ್ಣಗಳನ್ನು ಬದಲಾಯಿಸುತ್ತದೆ.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

3 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

6 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

20 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

22 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago