ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪಯಣ ಬೆಳೆಸಿದ ರಾಹುಲ್ ಗಾಂಧಿ: ತನ್ನ ತಂದೆ ಹುಟ್ಟುಹಬ್ಬ ಆಚರಿಸಲು ಹೊರಟ ರಾಹುಲ್ ಗಾಂಧಿ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ದೇಶದಲ್ಲಿ ಸಂಚಲನ ಮೂಡಿಸಿದ್ದ ರಾಹುಲ್ ಗಾಂಧಿ. ಇದೀಗ ಯುದ್ಧ ಭೂಮಿಯತ್ತ ಬೈಕ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಜಮ್ಮು ಕಾಶ್ಮೀರದ ಪೂರ್ವ ಲಡಾಖ್‌ನ ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪ್ರಯಾಣ ಬೆಳೆಸಿದರು, ಅಲ್ಲಿ ಅವರು ಪ್ರವಾಸಿ ಶಿಬಿರದಲ್ಲಿ ರಾತ್ರಿ ತಂಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ರಾಹುಲ್ ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾದ ಆಗಸ್ಟ್ 20 ರಂದು ಪ್ಯಾಂಗಾಂಗ್ ಸರೋವರದಲ್ಲಿ ಆಚರಿಸಲಿದ್ದಾರೆ. ಇದಕ್ಕೂ ಮುನ್ನಾ ಶುಕ್ರವಾರ ಲಡಾಖ್‌ಗೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಲೇಹ್‌ನಲ್ಲಿ 500 ಕ್ಕೂ ಹೆಚ್ಚು ಯುವಕರೊಂದಿಗೆ ಸಂವಾದ ನಡೆಸಿದರು. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿ ಇದಾಗಿದೆ.

ಎಲ್ಲಿದೆ ಗೊತ್ತಾ ಪ್ಯಾಂಗೊಂಗ್ ಸರೋವರ?

ಸುಮಾರು 4,350 ಮೀಟರ್ ಎತ್ತರದಲ್ಲಿರುವ ಪ್ಯಾಂಗೊಂಗ್ ಸರೋವರವು ವಿಶ್ವದ ಅತಿ ಎತ್ತರದ ಉಪ್ಪುನೀರಿನ ಸರೋವರವಾಗಿದೆ. ಅದರ ನೀರು, ನೀಲಿ ಬಣ್ಣದಿಂದ ಕಂಗೊಳಿಸುತ್ತದೆ, ಈ ಸರೋವರ ಸುಮಾರು 160 ಕಿಲೋಮೀಟರ್ ವರೆಗೆ ವಿಸ್ತರಿಸಿದೆ.

ಲೇಹ್ ಲಡಾಖ್‌ನ ಅತ್ಯಂತ ಪ್ರಸಿದ್ಧ ಸರೋವರಗಳಲ್ಲಿ ಒಂದಾದ ಪ್ಯಾಂಗೊಂಗ್ ಸರೋವರವು ಟಿಬೆಟಿಯನ್ ಪದವಾದ ಪ್ಯಾಂಗಾಂಗ್ ತ್ಸೋ ನಿಂದ ತನ್ನ ಹೆಸರನ್ನು ಪಡೆದುಕೊಂಡಿದೆ, ಇದರರ್ಥ ಎತ್ತರದ ಹುಲ್ಲುಗಾವಲು ಸರೋವರ. ನೀವು ಇಲ್ಲಿ ಗಂಟೆಗಟ್ಟಲೆ ಧ್ಯಾನಿಸಬಹುದು, ಪ್ಯಾಂಗೊಂಗ್ ಸರೋವರವು ವಿವಿಧ ಸಮಯಗಳಲ್ಲಿ ನೀಲಿ, ಹಸಿರು ಮತ್ತು ಕೆಂಪು ಬಣ್ಣಗಳಲ್ಲಿ ಬಣ್ಣಗಳನ್ನು ಬದಲಾಯಿಸುತ್ತದೆ.

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

41 minutes ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

8 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

16 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

17 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago