ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ ಎಂದು ಸರ್ಕಾರ ತಿಳಿಸಿದೆ.
ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ನ ಹಮಾಸ್ ಉಗ್ರರ ನಡುವಿನ ಯುದ್ಧ ಎರಡನೇ ದಿನ ಮತ್ತಷ್ಟು ಭೀಕರತೆಯನ್ನ ಪಡೆದುಕೊಂಡಿದೆ. ದಾಳಿ-ಪ್ರತಿದಾಳಿಗಳಿಂದ ಆನೇಕ ಸಾವು ನೋವು ಹೆಚ್ಚಾಗುತ್ತಿದೆ. 48 ಗಂಟೆ ಅವಧಿಯಲ್ಲಿ 1000 ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಈ ಪೈಕಿ ಇಸ್ರೇಲ್ ಪ್ರಜೆಗಳ ಸಂಖ್ಯೆಯೇ 600ಕ್ಕೂ ಅಧಿಕವಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಈ ಹಿನ್ನೆಲೆ ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.
ಯಾವುದೇ ರೀತಿಯ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ 080 22340676, 080 22253707 ಸಂಪರ್ಕಿಸಬಹುದು. ಅದೇ ರೀತಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ +97235226748 ಸಂಖ್ಯೆಗೆ ಕರೆ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…