ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ ಎಂದು ಸರ್ಕಾರ ತಿಳಿಸಿದೆ.
ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ನ ಹಮಾಸ್ ಉಗ್ರರ ನಡುವಿನ ಯುದ್ಧ ಎರಡನೇ ದಿನ ಮತ್ತಷ್ಟು ಭೀಕರತೆಯನ್ನ ಪಡೆದುಕೊಂಡಿದೆ. ದಾಳಿ-ಪ್ರತಿದಾಳಿಗಳಿಂದ ಆನೇಕ ಸಾವು ನೋವು ಹೆಚ್ಚಾಗುತ್ತಿದೆ. 48 ಗಂಟೆ ಅವಧಿಯಲ್ಲಿ 1000 ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಈ ಪೈಕಿ ಇಸ್ರೇಲ್ ಪ್ರಜೆಗಳ ಸಂಖ್ಯೆಯೇ 600ಕ್ಕೂ ಅಧಿಕವಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಈ ಹಿನ್ನೆಲೆ ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.
ಯಾವುದೇ ರೀತಿಯ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ 080 22340676, 080 22253707 ಸಂಪರ್ಕಿಸಬಹುದು. ಅದೇ ರೀತಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ +97235226748 ಸಂಖ್ಯೆಗೆ ಕರೆ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…