Categories: ಕೋಲಾರ

ಪ್ಯಾಲೆಸ್ಟೈನ್ ಪರ ಘೋಷಣೆ ಆರೋಪ: ಇದರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯ

ಕೋಲಾರ: ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯ ಸಂದರ್ಭದಲ್ಲಿನ ಗಲಾಟೆಗೆ ಕಾರಣವಾದ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು,

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಳೆದ ಸೋಮವಾರ ಮುಸ್ಲಿಂ ಸಮುದಾಯದ ಹಬ್ಬ ಈದ್ ಮಿಲಾದ್ ಸಂದರ್ಭದಲ್ಲಿ ರಸ್ತೆ ಮೆರವಣಿಗೆ ಮೂಲಕ ಹಾದು ಹೋಗುವಾಗ ಜಿಲ್ಲಾಡಳಿತ ನಿಗದಿಪಡಿಸಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದು ಅಲ್ಲದೇ ಪ್ಯಾಲೆಸೈನ್ ಬಾವುಟ ಪ್ರದರ್ಶನ ಮಾಡಿ ಭಾವುಟ ಹಾರಿಸಿದ ದೇಶದ್ರೋಹಿಗಳನ್ನು ಹಾಗೂ ಈ ದೇಶದ ಕಾನೂನಿಗೆ ಗೌರವ ನೀಡದೆ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಕೂಗಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂಬುದು ಒತ್ತಾಯಿಸಿದರು.

ದೇಶದ್ರೋಹ ಕೃತ್ಯವನ್ನು ಜನಪ್ರತಿನಿಧಿಗಳ ಮುಂದೆಯೇ ನಡೆದಿದೆ ಪ್ಯಾಲೆಸ್ಟೈನ್ ಬಾವುಟ ಪ್ರದರ್ಶನ ಮಾಡಿದ್ದು ಮತ್ತು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದು ಈ ಘಟನೆಯನ್ನು ತಡೆಯದೆ ಇದಕ್ಕೆ ಕುಮ್ಮಕು ಕೊಟ್ಟಂತಹ ಜನಪ್ರತಿನಿಧಿಗಳ ಮೇಲು ಕಾನೂ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಮುಖವಾಗಿ ಅಂಜುಮನ್ ಇಸ್ಲಾಮಿಯ ಸಂಸ್ಥೆಯ ಮುಖ್ಯಸ್ಥ ಮೇಲೆ ದೇಶದ್ರೋಹ
ಪ್ರಕರಣ ದಾಖಲಿಸಬೇಕು ಎರಡು ದಿನಗಳಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮನವಿ ಕೊಡುವ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಲಾಜಿ, ಕೆಂಬೋಡಿ ನಾರಾಯಣಸ್ವಾಮಿ ಇದ್ದರು.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

56 minutes ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

3 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

14 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

14 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

16 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

17 hours ago