ಕೋಲಾರ: ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯ ಸಂದರ್ಭದಲ್ಲಿನ ಗಲಾಟೆಗೆ ಕಾರಣವಾದ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು,
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಳೆದ ಸೋಮವಾರ ಮುಸ್ಲಿಂ ಸಮುದಾಯದ ಹಬ್ಬ ಈದ್ ಮಿಲಾದ್ ಸಂದರ್ಭದಲ್ಲಿ ರಸ್ತೆ ಮೆರವಣಿಗೆ ಮೂಲಕ ಹಾದು ಹೋಗುವಾಗ ಜಿಲ್ಲಾಡಳಿತ ನಿಗದಿಪಡಿಸಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದು ಅಲ್ಲದೇ ಪ್ಯಾಲೆಸೈನ್ ಬಾವುಟ ಪ್ರದರ್ಶನ ಮಾಡಿ ಭಾವುಟ ಹಾರಿಸಿದ ದೇಶದ್ರೋಹಿಗಳನ್ನು ಹಾಗೂ ಈ ದೇಶದ ಕಾನೂನಿಗೆ ಗೌರವ ನೀಡದೆ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಕೂಗಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂಬುದು ಒತ್ತಾಯಿಸಿದರು.
ದೇಶದ್ರೋಹ ಕೃತ್ಯವನ್ನು ಜನಪ್ರತಿನಿಧಿಗಳ ಮುಂದೆಯೇ ನಡೆದಿದೆ ಪ್ಯಾಲೆಸ್ಟೈನ್ ಬಾವುಟ ಪ್ರದರ್ಶನ ಮಾಡಿದ್ದು ಮತ್ತು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದು ಈ ಘಟನೆಯನ್ನು ತಡೆಯದೆ ಇದಕ್ಕೆ ಕುಮ್ಮಕು ಕೊಟ್ಟಂತಹ ಜನಪ್ರತಿನಿಧಿಗಳ ಮೇಲು ಕಾನೂ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಮುಖವಾಗಿ ಅಂಜುಮನ್ ಇಸ್ಲಾಮಿಯ ಸಂಸ್ಥೆಯ ಮುಖ್ಯಸ್ಥ ಮೇಲೆ ದೇಶದ್ರೋಹ
ಪ್ರಕರಣ ದಾಖಲಿಸಬೇಕು ಎರಡು ದಿನಗಳಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮನವಿ ಕೊಡುವ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಲಾಜಿ, ಕೆಂಬೋಡಿ ನಾರಾಯಣಸ್ವಾಮಿ ಇದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…