Categories: ಕೋಲಾರ

ಪ್ಯಾಲೆಸ್ಟೈನ್ ಪರ ಘೋಷಣೆ ಆರೋಪ: ಇದರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯ

ಕೋಲಾರ: ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯ ಸಂದರ್ಭದಲ್ಲಿನ ಗಲಾಟೆಗೆ ಕಾರಣವಾದ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು,

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಳೆದ ಸೋಮವಾರ ಮುಸ್ಲಿಂ ಸಮುದಾಯದ ಹಬ್ಬ ಈದ್ ಮಿಲಾದ್ ಸಂದರ್ಭದಲ್ಲಿ ರಸ್ತೆ ಮೆರವಣಿಗೆ ಮೂಲಕ ಹಾದು ಹೋಗುವಾಗ ಜಿಲ್ಲಾಡಳಿತ ನಿಗದಿಪಡಿಸಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದು ಅಲ್ಲದೇ ಪ್ಯಾಲೆಸೈನ್ ಬಾವುಟ ಪ್ರದರ್ಶನ ಮಾಡಿ ಭಾವುಟ ಹಾರಿಸಿದ ದೇಶದ್ರೋಹಿಗಳನ್ನು ಹಾಗೂ ಈ ದೇಶದ ಕಾನೂನಿಗೆ ಗೌರವ ನೀಡದೆ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಕೂಗಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂಬುದು ಒತ್ತಾಯಿಸಿದರು.

ದೇಶದ್ರೋಹ ಕೃತ್ಯವನ್ನು ಜನಪ್ರತಿನಿಧಿಗಳ ಮುಂದೆಯೇ ನಡೆದಿದೆ ಪ್ಯಾಲೆಸ್ಟೈನ್ ಬಾವುಟ ಪ್ರದರ್ಶನ ಮಾಡಿದ್ದು ಮತ್ತು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದು ಈ ಘಟನೆಯನ್ನು ತಡೆಯದೆ ಇದಕ್ಕೆ ಕುಮ್ಮಕು ಕೊಟ್ಟಂತಹ ಜನಪ್ರತಿನಿಧಿಗಳ ಮೇಲು ಕಾನೂ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಮುಖವಾಗಿ ಅಂಜುಮನ್ ಇಸ್ಲಾಮಿಯ ಸಂಸ್ಥೆಯ ಮುಖ್ಯಸ್ಥ ಮೇಲೆ ದೇಶದ್ರೋಹ
ಪ್ರಕರಣ ದಾಖಲಿಸಬೇಕು ಎರಡು ದಿನಗಳಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮನವಿ ಕೊಡುವ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಲಾಜಿ, ಕೆಂಬೋಡಿ ನಾರಾಯಣಸ್ವಾಮಿ ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

15 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

15 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 day ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 days ago