Categories: ಕೋಲಾರ

ಪ್ಯಾಲೆಸ್ಟೈನ್ ಪರ ಘೋಷಣೆ ಆರೋಪ: ಇದರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯ

ಕೋಲಾರ: ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯ ಸಂದರ್ಭದಲ್ಲಿನ ಗಲಾಟೆಗೆ ಕಾರಣವಾದ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು,

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಳೆದ ಸೋಮವಾರ ಮುಸ್ಲಿಂ ಸಮುದಾಯದ ಹಬ್ಬ ಈದ್ ಮಿಲಾದ್ ಸಂದರ್ಭದಲ್ಲಿ ರಸ್ತೆ ಮೆರವಣಿಗೆ ಮೂಲಕ ಹಾದು ಹೋಗುವಾಗ ಜಿಲ್ಲಾಡಳಿತ ನಿಗದಿಪಡಿಸಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದು ಅಲ್ಲದೇ ಪ್ಯಾಲೆಸೈನ್ ಬಾವುಟ ಪ್ರದರ್ಶನ ಮಾಡಿ ಭಾವುಟ ಹಾರಿಸಿದ ದೇಶದ್ರೋಹಿಗಳನ್ನು ಹಾಗೂ ಈ ದೇಶದ ಕಾನೂನಿಗೆ ಗೌರವ ನೀಡದೆ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಕೂಗಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂಬುದು ಒತ್ತಾಯಿಸಿದರು.

ದೇಶದ್ರೋಹ ಕೃತ್ಯವನ್ನು ಜನಪ್ರತಿನಿಧಿಗಳ ಮುಂದೆಯೇ ನಡೆದಿದೆ ಪ್ಯಾಲೆಸ್ಟೈನ್ ಬಾವುಟ ಪ್ರದರ್ಶನ ಮಾಡಿದ್ದು ಮತ್ತು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದು ಈ ಘಟನೆಯನ್ನು ತಡೆಯದೆ ಇದಕ್ಕೆ ಕುಮ್ಮಕು ಕೊಟ್ಟಂತಹ ಜನಪ್ರತಿನಿಧಿಗಳ ಮೇಲು ಕಾನೂ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಮುಖವಾಗಿ ಅಂಜುಮನ್ ಇಸ್ಲಾಮಿಯ ಸಂಸ್ಥೆಯ ಮುಖ್ಯಸ್ಥ ಮೇಲೆ ದೇಶದ್ರೋಹ
ಪ್ರಕರಣ ದಾಖಲಿಸಬೇಕು ಎರಡು ದಿನಗಳಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮನವಿ ಕೊಡುವ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಲಾಜಿ, ಕೆಂಬೋಡಿ ನಾರಾಯಣಸ್ವಾಮಿ ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago