ಕೋಲಾರ: ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯ ಸಂದರ್ಭದಲ್ಲಿನ ಗಲಾಟೆಗೆ ಕಾರಣವಾದ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು,
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಳೆದ ಸೋಮವಾರ ಮುಸ್ಲಿಂ ಸಮುದಾಯದ ಹಬ್ಬ ಈದ್ ಮಿಲಾದ್ ಸಂದರ್ಭದಲ್ಲಿ ರಸ್ತೆ ಮೆರವಣಿಗೆ ಮೂಲಕ ಹಾದು ಹೋಗುವಾಗ ಜಿಲ್ಲಾಡಳಿತ ನಿಗದಿಪಡಿಸಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದು ಅಲ್ಲದೇ ಪ್ಯಾಲೆಸೈನ್ ಬಾವುಟ ಪ್ರದರ್ಶನ ಮಾಡಿ ಭಾವುಟ ಹಾರಿಸಿದ ದೇಶದ್ರೋಹಿಗಳನ್ನು ಹಾಗೂ ಈ ದೇಶದ ಕಾನೂನಿಗೆ ಗೌರವ ನೀಡದೆ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಕೂಗಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂಬುದು ಒತ್ತಾಯಿಸಿದರು.
ದೇಶದ್ರೋಹ ಕೃತ್ಯವನ್ನು ಜನಪ್ರತಿನಿಧಿಗಳ ಮುಂದೆಯೇ ನಡೆದಿದೆ ಪ್ಯಾಲೆಸ್ಟೈನ್ ಬಾವುಟ ಪ್ರದರ್ಶನ ಮಾಡಿದ್ದು ಮತ್ತು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದು ಈ ಘಟನೆಯನ್ನು ತಡೆಯದೆ ಇದಕ್ಕೆ ಕುಮ್ಮಕು ಕೊಟ್ಟಂತಹ ಜನಪ್ರತಿನಿಧಿಗಳ ಮೇಲು ಕಾನೂ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಮುಖವಾಗಿ ಅಂಜುಮನ್ ಇಸ್ಲಾಮಿಯ ಸಂಸ್ಥೆಯ ಮುಖ್ಯಸ್ಥ ಮೇಲೆ ದೇಶದ್ರೋಹ
ಪ್ರಕರಣ ದಾಖಲಿಸಬೇಕು ಎರಡು ದಿನಗಳಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮನವಿ ಕೊಡುವ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಲಾಜಿ, ಕೆಂಬೋಡಿ ನಾರಾಯಣಸ್ವಾಮಿ ಇದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…