Categories: ಕೋಲಾರ

ಪ್ಯಾಲೆಸ್ಟೈನ್ ಯುದ್ದ ನಿಲ್ಲಿಸಲು ಪ್ರಧಾನಿ ಮೋದಿ ಮಧ್ಯೆ ಪ್ರವೇಶಿಸಬೇಕು- ಸಿಪಿಐಎಂ ಒತ್ತಾಯ

ಕೋಲಾರ: ಪ್ಯಾಲೆಸ್ಟೀನ್ ದೇಶದ ಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇರುವ ಯುದ್ಧವನ್ನು ನಿಯಂತ್ರಿಸಲು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪ್ರಯತ್ನಿಸಬೇಕು ಎಂದು ಒತ್ತಾಯಿಸಿ ನಗರದ ತಹಶಿಲ್ದಾರ್ ಕಚೇರಿ ಮುಂದೆ ಸೋಮವಾರ ಸಿಪಿಐಎಂ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಳೆದ 2023ರ ಅಕ್ಟೋಬರ್‌ನಿಂದ ಗಾಜಾ ಪಟ್ಟಿ ಮೇಲೆ ಇಸ್ರೇಲ್ ದೇಶವು ನಡೆಸುತ್ತಿರುವ ಅಮಾನವೀಯ ಯುದ್ಧ ಎಂಟು ತಿಂಗಳು ಕಳೆದರು ಮುಂದುವರಿಯುತ್ತಲೇ ಇದ್ದು, ಜಗತ್ತಿನಾದ್ಯಂತ ಸ್ವಾತಂತ್ರ್ಯ ಹಾಗೂ ಶಾಂತಿಪ್ರಿಯ ಜನರಲ್ಲಿ ಕಳವಳ ಮೂಡಿಸಿದೆ. ತನ್ನದೇ ಸ್ವಂತ ದೇಶವನ್ನು ಹೊಂದುವ ಪ್ಯಾಲೆಸ್ಟೀನ್ ಜನರ ಮಹತ್ತರವಾದ ಆಕಾಂಕ್ಷೆಗೆ ದನಿಯಾಗಿ ಹೋರಾಡುತ್ತಿರುವ ಹಮಾಸ್ ಸಂಘಟನೆಯು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನೆಪವಾಗಿಟ್ಟುಕೊಂಡು ಈ ಬಾರಿ ಗಾಜಾ ಪಟ್ಟಿ ಮೇಲೆ ಇಸ್ರೇಲ್ ಪೂರ್ಣ ಪ್ರಮಾಣದ ಯುದ್ಧವನ್ನೇ ಸಾರಿದೆ ಎಂದು ಆರೋಪಿಸಿದರು.

ಪ್ಯಾಲೆಸ್ತೀನಿ ಜನರು ಏಳು ದಶಕಗಳಿಂದ ನೆಲ ಮತ್ತು ನೆಲೆ ಕಳೆದುಕೊಳ್ಳುವಿಕೆ ಹಾಗೂ ವಸಾಹತುಶಾಹಿ ಅತಿಕ್ರಮಣದ ಕಷ್ಟ ನಷ್ಟಕ್ಕೆ ಗುರಿಯಾಗಿದ್ದಾರೆ. ಇಸ್ರೇಲ್ 1948ರಲ್ಲಿ ಅವರನ್ನು ತಾಯ್ನೆಲದಿಂದ ಹೊರಗಟ್ಟಿದೆ. ಭಾರತ ತನ್ನ ಸ್ವಾತಂತ್ರ್ಯ ಸಂಗ್ರಾಮದ ಕಾಲದಿಂದಲೂ ಪ್ಯಾಲೆಸ್ಟೀನಿ ಜನರಿಗೆ ಪೂರ್ಣ ಸಹಾನುಭೂತಿ ಮತ್ತು ಸೌಹಾರ್ದತೆ ವ್ಯಕ್ತಪಡಿಸುತ್ತಾ ಬಂದಿದೆ. ಆದರೆ ಆ ದೇಶದಲ್ಲಿ ಅಸಹಾಯಕವಾದರೂ ಕೆಚ್ಚೆದೆಯಿಂದ ಬದುಕುತ್ತಿರುವ ಧೀರ ಜನರ ಮೇಲೆ ದಬ್ಬಾಳಿಕೆ ನಡೆಸುವವರ ಪರವಾಗಿ ಹೋಗುತ್ತಿರುವಂತೆ ಕಾಣುತ್ತಿದ್ದು ಭಾರತ ಅನುಸರಿಸಿಕೊಂಡು ಬಂದ ಅಲಿಪ್ತ ನೀತಿಗೇ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಪ್ರಸಕ್ತ ಯುದ್ಧದಲ್ಲಿ ಈವರೆಗೆ 36 ಸಾವಿರಕ್ಕೂ ಹೆಚ್ಚು ಜನರು ಬಲಿಯಾಗಿದ್ದು ಅವರಲ್ಲಿ ಗಣನೀಯ ಸಂಖ್ಯೆಯ ಮುಗ್ಧ ಮಕ್ಕಳು ಮತ್ತು ಮಹಿಳೆಯರು ಇರುವುದು ಹೃದಯ ಕಲಕುವ ಸಂಗತಿಯಾಗಿದೆ. ಈ ಸಮರವನ್ನು ಮುಂದುವರಿಸಿದರೆ ಮಾನವ ದುರಂತವೇ ಸಂಭವಿಸಲಿದೆ ಎಂಬ ವಿಶ್ವ ಸಂಸ್ಥೆಯ ಅಭಿಪ್ರಾಯವನ್ನು ಧಿಕ್ಕರಿಸಿರುವ ಇಸ್ರೇಲ್ ಧೋರಣೆಗೆ ಅಮೆರಿಕದಂತೆ ಭಾರತ ಸರಕಾರ ಕೂಡ ಬೆಂಬಲ ನೀಡುತ್ತಿರುವುದು ಖಂಡನೀಯವಾಗಿದೆ ಎಂದರು.

ತನ್ನ ಸ್ವಂತ ದೇಶದ ಕನಸನ್ನು ಸಾಕಾರಗೊಳಿಸಲು ಹೋರಾಡುತ್ತಿರುವ ಪ್ಯಾಲೆಸ್ಟೀನಿ ಜನರ ಪರವಾಗಿ ನಿಲ್ಲುವುದು ಮಹಾನ್ ಸಾಮ್ರಾಜ್ಯಶಾಹಿ ವಿರೋಧಿ ಹಾಗೂ ವಸಾಹತುಶಾಹಿ ವಿರೋಧಿ ಪರಂಪರೆಯನ್ನು ಹೊಂದಿರುವ ಭಾರತದ ಆದ್ಯ ರಾಜಕೀಯ ಹಾಗೂ ಮಾನವೀಯ ಕರ್ತವ್ಯವಾಗಿದೆ. ಆದ್ದರಿಂದ, ಗಾಜಾ ಪಟ್ಟಿಯಲ್ಲಿ ಯುದ್ಧ ಮುಂದುವರಿಸಲು ಅನುಕೂಲವಾಗುವಂತೆ ಇಸ್ರೇಲ್‌ಗೆ ಯಾವುದೇ ರೀತಿಯ ಸಹಾಯ-ಸಹಕಾರ ನೀಡಬಾರದೆಂದು ಹಾಗೂ ಜಾಗತಿಕ ರಂಗದಲ್ಲಿ ಭಾರತ ಹೊಂದಿರುವ ಪ್ರತಿಷ್ಠೆ-ಪ್ರಭಾವವನ್ನು ಬಳಸಿಕೊಂಡು ಮಧ್ಯಪ್ರವೇಶಿಸಿ ಯುದ್ಧವನ್ನು ಕೊನೆಗೊಳಿಸಲು ಗರಿಷ್ಠ ಪ್ರಯತ್ನವನ್ನು ಮೋದಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಶ್ರೀನಿವಾಸ್, ಪಿ.ಆರ್.ಸೂರ್ಯನಾರಾಯಣ, ಮುಖಂಡರಾದ ಪಿ.ತಂಗರಾಜ್, ಎಸ್.ಡಿ. ಆನಂದರಾಜ್, ಪಿ.ಆರ್.ಶಂಕರ್, ಎಂ.ವಿಜಯಕೃಷ್ಣ, ಹನುಮಂತರಾಯ, ಅಪ್ಪಯ್ಯಣ್ಣ ವಿ.ನಾರಾಯಣರೆಡ್ಡಿ, ಎನ್.ಎನ್.ಶ್ರೀರಾಮ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

6 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

12 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

13 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago