Categories: ಕೋಲಾರ

ಪ್ಯಾಲೆಸ್ಟೈನ್ ಯುದ್ದ ನಿಲ್ಲಿಸಲು ಪ್ರಧಾನಿ ಮೋದಿ ಮಧ್ಯೆ ಪ್ರವೇಶಿಸಬೇಕು- ಸಿಪಿಐಎಂ ಒತ್ತಾಯ

ಕೋಲಾರ: ಪ್ಯಾಲೆಸ್ಟೀನ್ ದೇಶದ ಜನರ ಮೇಲೆ ನಿರಂತರವಾಗಿ ನಡೆಯುತ್ತಲೇ ಇರುವ ಯುದ್ಧವನ್ನು ನಿಯಂತ್ರಿಸಲು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಪ್ರಯತ್ನಿಸಬೇಕು ಎಂದು ಒತ್ತಾಯಿಸಿ ನಗರದ ತಹಶಿಲ್ದಾರ್ ಕಚೇರಿ ಮುಂದೆ ಸೋಮವಾರ ಸಿಪಿಐಎಂ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಳೆದ 2023ರ ಅಕ್ಟೋಬರ್‌ನಿಂದ ಗಾಜಾ ಪಟ್ಟಿ ಮೇಲೆ ಇಸ್ರೇಲ್ ದೇಶವು ನಡೆಸುತ್ತಿರುವ ಅಮಾನವೀಯ ಯುದ್ಧ ಎಂಟು ತಿಂಗಳು ಕಳೆದರು ಮುಂದುವರಿಯುತ್ತಲೇ ಇದ್ದು, ಜಗತ್ತಿನಾದ್ಯಂತ ಸ್ವಾತಂತ್ರ್ಯ ಹಾಗೂ ಶಾಂತಿಪ್ರಿಯ ಜನರಲ್ಲಿ ಕಳವಳ ಮೂಡಿಸಿದೆ. ತನ್ನದೇ ಸ್ವಂತ ದೇಶವನ್ನು ಹೊಂದುವ ಪ್ಯಾಲೆಸ್ಟೀನ್ ಜನರ ಮಹತ್ತರವಾದ ಆಕಾಂಕ್ಷೆಗೆ ದನಿಯಾಗಿ ಹೋರಾಡುತ್ತಿರುವ ಹಮಾಸ್ ಸಂಘಟನೆಯು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನೆಪವಾಗಿಟ್ಟುಕೊಂಡು ಈ ಬಾರಿ ಗಾಜಾ ಪಟ್ಟಿ ಮೇಲೆ ಇಸ್ರೇಲ್ ಪೂರ್ಣ ಪ್ರಮಾಣದ ಯುದ್ಧವನ್ನೇ ಸಾರಿದೆ ಎಂದು ಆರೋಪಿಸಿದರು.

ಪ್ಯಾಲೆಸ್ತೀನಿ ಜನರು ಏಳು ದಶಕಗಳಿಂದ ನೆಲ ಮತ್ತು ನೆಲೆ ಕಳೆದುಕೊಳ್ಳುವಿಕೆ ಹಾಗೂ ವಸಾಹತುಶಾಹಿ ಅತಿಕ್ರಮಣದ ಕಷ್ಟ ನಷ್ಟಕ್ಕೆ ಗುರಿಯಾಗಿದ್ದಾರೆ. ಇಸ್ರೇಲ್ 1948ರಲ್ಲಿ ಅವರನ್ನು ತಾಯ್ನೆಲದಿಂದ ಹೊರಗಟ್ಟಿದೆ. ಭಾರತ ತನ್ನ ಸ್ವಾತಂತ್ರ್ಯ ಸಂಗ್ರಾಮದ ಕಾಲದಿಂದಲೂ ಪ್ಯಾಲೆಸ್ಟೀನಿ ಜನರಿಗೆ ಪೂರ್ಣ ಸಹಾನುಭೂತಿ ಮತ್ತು ಸೌಹಾರ್ದತೆ ವ್ಯಕ್ತಪಡಿಸುತ್ತಾ ಬಂದಿದೆ. ಆದರೆ ಆ ದೇಶದಲ್ಲಿ ಅಸಹಾಯಕವಾದರೂ ಕೆಚ್ಚೆದೆಯಿಂದ ಬದುಕುತ್ತಿರುವ ಧೀರ ಜನರ ಮೇಲೆ ದಬ್ಬಾಳಿಕೆ ನಡೆಸುವವರ ಪರವಾಗಿ ಹೋಗುತ್ತಿರುವಂತೆ ಕಾಣುತ್ತಿದ್ದು ಭಾರತ ಅನುಸರಿಸಿಕೊಂಡು ಬಂದ ಅಲಿಪ್ತ ನೀತಿಗೇ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಪ್ರಸಕ್ತ ಯುದ್ಧದಲ್ಲಿ ಈವರೆಗೆ 36 ಸಾವಿರಕ್ಕೂ ಹೆಚ್ಚು ಜನರು ಬಲಿಯಾಗಿದ್ದು ಅವರಲ್ಲಿ ಗಣನೀಯ ಸಂಖ್ಯೆಯ ಮುಗ್ಧ ಮಕ್ಕಳು ಮತ್ತು ಮಹಿಳೆಯರು ಇರುವುದು ಹೃದಯ ಕಲಕುವ ಸಂಗತಿಯಾಗಿದೆ. ಈ ಸಮರವನ್ನು ಮುಂದುವರಿಸಿದರೆ ಮಾನವ ದುರಂತವೇ ಸಂಭವಿಸಲಿದೆ ಎಂಬ ವಿಶ್ವ ಸಂಸ್ಥೆಯ ಅಭಿಪ್ರಾಯವನ್ನು ಧಿಕ್ಕರಿಸಿರುವ ಇಸ್ರೇಲ್ ಧೋರಣೆಗೆ ಅಮೆರಿಕದಂತೆ ಭಾರತ ಸರಕಾರ ಕೂಡ ಬೆಂಬಲ ನೀಡುತ್ತಿರುವುದು ಖಂಡನೀಯವಾಗಿದೆ ಎಂದರು.

ತನ್ನ ಸ್ವಂತ ದೇಶದ ಕನಸನ್ನು ಸಾಕಾರಗೊಳಿಸಲು ಹೋರಾಡುತ್ತಿರುವ ಪ್ಯಾಲೆಸ್ಟೀನಿ ಜನರ ಪರವಾಗಿ ನಿಲ್ಲುವುದು ಮಹಾನ್ ಸಾಮ್ರಾಜ್ಯಶಾಹಿ ವಿರೋಧಿ ಹಾಗೂ ವಸಾಹತುಶಾಹಿ ವಿರೋಧಿ ಪರಂಪರೆಯನ್ನು ಹೊಂದಿರುವ ಭಾರತದ ಆದ್ಯ ರಾಜಕೀಯ ಹಾಗೂ ಮಾನವೀಯ ಕರ್ತವ್ಯವಾಗಿದೆ. ಆದ್ದರಿಂದ, ಗಾಜಾ ಪಟ್ಟಿಯಲ್ಲಿ ಯುದ್ಧ ಮುಂದುವರಿಸಲು ಅನುಕೂಲವಾಗುವಂತೆ ಇಸ್ರೇಲ್‌ಗೆ ಯಾವುದೇ ರೀತಿಯ ಸಹಾಯ-ಸಹಕಾರ ನೀಡಬಾರದೆಂದು ಹಾಗೂ ಜಾಗತಿಕ ರಂಗದಲ್ಲಿ ಭಾರತ ಹೊಂದಿರುವ ಪ್ರತಿಷ್ಠೆ-ಪ್ರಭಾವವನ್ನು ಬಳಸಿಕೊಂಡು ಮಧ್ಯಪ್ರವೇಶಿಸಿ ಯುದ್ಧವನ್ನು ಕೊನೆಗೊಳಿಸಲು ಗರಿಷ್ಠ ಪ್ರಯತ್ನವನ್ನು ಮೋದಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಶ್ರೀನಿವಾಸ್, ಪಿ.ಆರ್.ಸೂರ್ಯನಾರಾಯಣ, ಮುಖಂಡರಾದ ಪಿ.ತಂಗರಾಜ್, ಎಸ್.ಡಿ. ಆನಂದರಾಜ್, ಪಿ.ಆರ್.ಶಂಕರ್, ಎಂ.ವಿಜಯಕೃಷ್ಣ, ಹನುಮಂತರಾಯ, ಅಪ್ಪಯ್ಯಣ್ಣ ವಿ.ನಾರಾಯಣರೆಡ್ಡಿ, ಎನ್.ಎನ್.ಶ್ರೀರಾಮ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago