ಪ್ಯಾಸೆಂಜರ್ ಆಟೋ ಚಾಲಕರೇ ರೋಡಿಗಿಳಿಯುವ ಮುನ್ನ ಎಚ್ಚರ: ಸೂಕ್ತ ದಾಖಲೆಗಳಿಲ್ಲದೇ ರೋಡಿಗಿಳಿದರೆ ಬೀಳುತ್ತೆ ಫೈನ್

ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಸೇರಿದಂತೆ ಇತರೆ ದಾಖಲೆಗಳಿಲ್ಲದೇ ರೋಡಿಗಿಳಿದಿದ್ದ ಪ್ಯಾಸೆಂಜರ್ ಆಟೋಗಳನ್ನು ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ ಮೇರೆಗೆ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ನೇತೃತ್ವದಲ್ಲಿ ನಗರದ ಡಿಕ್ರಾಸ್ ಬಳಿ ತಡೆದು ಪರಿಶೀಲನೆ ನಡೆಸಲಾಗುತ್ತಿದೆ.

ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಇಲ್ಲದ ಆಟೋಗಳನ್ನು ಸದ್ಯ ವಶಕ್ಕೆ ಪಡೆಯಲಾಗುತ್ತಿದೆ.

ಆಟೋ ರಿಕ್ಷಾಗಳು ಯಾವುದೇ ಪರ್ಮಿಟ್ ಇಲ್ಲದೇ, ಕಾನೂನು ಬಾಹಿರವಾಗಿ ಸಂಚರಿಸುತ್ತಿರುವ ಪರಿಣಾಮ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಅಲ್ಲದೇ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುವುದು, ಎಲ್ಲೆಂದರಲ್ಲಿ ಏಕಾಏಕಿ ನಿಲ್ಲಿಸುವ ಮೂಲಕ ಸಂಚಾರ ನಿಯಮ ಪಾಲಿಸದೇ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ‌ ಬಂದ ದೂರಿನ ಮೇರೆಗೆ ಇಂದು ಪೊಲೀಸರು ಆಟೋ ರಿಕ್ಷಾಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ….

ಪೊಲೀಸರು ಎಷ್ಟೇ ಎಚ್ಚರಿಕೆ, ಸೂಚನೆ ನೀಡಿದರೂ ಬಹುತೇಕ ಆಟೋ ಚಾಲಕರು ಸಮವಸ್ತ್ರ ಧರಿಸದೇ ಆಟೋ ಓಡಿಸುತ್ತಿರುವುದು ಕಂಡುಬಂದಿದೆ. ಪೊಲೀಸರ ಕಣ್ಣು ತಪ್ಪಿಸಿ ಕಾನೂನು ಬಾಹಿರವಾಗಿ ಆಟೋ ಓಡಿಸುವವರ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಕಡಿವಾಣ ಅಗತ್ಯವಾಗಿದೆ.

ಆಟೋ ರಿಕ್ಷಾ ಚಾಲಕರಿಗೆ ಜಾಗೃತಿ ಮೂಡಿಸುವ ಜೊತೆಗೆ ದಾಖಲೆ ಪತ್ರಗಳಿಲ್ಲದೇ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುತ್ತಿದ್ದಾರೆ. ಆಟೋ ರಿಕ್ಷಾ ಚಾಲಕರು ಸಂಚಾರ ನಿಯಮ ಪಾಲಿಸಬೇಕು ಸಾರ್ವಜನಿಕರಿಗೆ ಪ್ರಯಾಣಿಕರಿಗೆ ತೊಂದರೆ ನೀಡಬಾರದು. ಪ್ರಯಾಣಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಪೊಲೀಸರು ಸೂಚಿಸಿದ್ದಾರೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

3 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

14 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

23 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago