ಪ್ಯಾಸೆಂಜರ್ ಆಟೋ ಚಾಲಕರೇ ರೋಡಿಗಿಳಿಯುವ ಮುನ್ನ ಎಚ್ಚರ: ಸೂಕ್ತ ದಾಖಲೆಗಳಿಲ್ಲದೇ ರೋಡಿಗಿಳಿದರೆ ಬೀಳುತ್ತೆ ಫೈನ್

ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಸೇರಿದಂತೆ ಇತರೆ ದಾಖಲೆಗಳಿಲ್ಲದೇ ರೋಡಿಗಿಳಿದಿದ್ದ ಪ್ಯಾಸೆಂಜರ್ ಆಟೋಗಳನ್ನು ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ ಮೇರೆಗೆ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ನೇತೃತ್ವದಲ್ಲಿ ನಗರದ ಡಿಕ್ರಾಸ್ ಬಳಿ ತಡೆದು ಪರಿಶೀಲನೆ ನಡೆಸಲಾಗುತ್ತಿದೆ.

ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಇಲ್ಲದ ಆಟೋಗಳನ್ನು ಸದ್ಯ ವಶಕ್ಕೆ ಪಡೆಯಲಾಗುತ್ತಿದೆ.

ಆಟೋ ರಿಕ್ಷಾಗಳು ಯಾವುದೇ ಪರ್ಮಿಟ್ ಇಲ್ಲದೇ, ಕಾನೂನು ಬಾಹಿರವಾಗಿ ಸಂಚರಿಸುತ್ತಿರುವ ಪರಿಣಾಮ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಅಲ್ಲದೇ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುವುದು, ಎಲ್ಲೆಂದರಲ್ಲಿ ಏಕಾಏಕಿ ನಿಲ್ಲಿಸುವ ಮೂಲಕ ಸಂಚಾರ ನಿಯಮ ಪಾಲಿಸದೇ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ‌ ಬಂದ ದೂರಿನ ಮೇರೆಗೆ ಇಂದು ಪೊಲೀಸರು ಆಟೋ ರಿಕ್ಷಾಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ….

ಪೊಲೀಸರು ಎಷ್ಟೇ ಎಚ್ಚರಿಕೆ, ಸೂಚನೆ ನೀಡಿದರೂ ಬಹುತೇಕ ಆಟೋ ಚಾಲಕರು ಸಮವಸ್ತ್ರ ಧರಿಸದೇ ಆಟೋ ಓಡಿಸುತ್ತಿರುವುದು ಕಂಡುಬಂದಿದೆ. ಪೊಲೀಸರ ಕಣ್ಣು ತಪ್ಪಿಸಿ ಕಾನೂನು ಬಾಹಿರವಾಗಿ ಆಟೋ ಓಡಿಸುವವರ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಕಡಿವಾಣ ಅಗತ್ಯವಾಗಿದೆ.

ಆಟೋ ರಿಕ್ಷಾ ಚಾಲಕರಿಗೆ ಜಾಗೃತಿ ಮೂಡಿಸುವ ಜೊತೆಗೆ ದಾಖಲೆ ಪತ್ರಗಳಿಲ್ಲದೇ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುತ್ತಿದ್ದಾರೆ. ಆಟೋ ರಿಕ್ಷಾ ಚಾಲಕರು ಸಂಚಾರ ನಿಯಮ ಪಾಲಿಸಬೇಕು ಸಾರ್ವಜನಿಕರಿಗೆ ಪ್ರಯಾಣಿಕರಿಗೆ ತೊಂದರೆ ನೀಡಬಾರದು. ಪ್ರಯಾಣಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಪೊಲೀಸರು ಸೂಚಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

11 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

12 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

15 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

20 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

24 hours ago