ಪ್ಯಾಸೆಂಜರ್ ಆಟೋ ಚಾಲಕರೇ ರೋಡಿಗಿಳಿಯುವ ಮುನ್ನ ಎಚ್ಚರ: ಸೂಕ್ತ ದಾಖಲೆಗಳಿಲ್ಲದೇ ರೋಡಿಗಿಳಿದರೆ ಬೀಳುತ್ತೆ ಫೈನ್

ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಸೇರಿದಂತೆ ಇತರೆ ದಾಖಲೆಗಳಿಲ್ಲದೇ ರೋಡಿಗಿಳಿದಿದ್ದ ಪ್ಯಾಸೆಂಜರ್ ಆಟೋಗಳನ್ನು ನಗರ ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೂಚನೆ ಮೇರೆಗೆ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ನೇತೃತ್ವದಲ್ಲಿ ನಗರದ ಡಿಕ್ರಾಸ್ ಬಳಿ ತಡೆದು ಪರಿಶೀಲನೆ ನಡೆಸಲಾಗುತ್ತಿದೆ.

ಪರ್ಮಿಟ್, ಇನ್ಶೂರೆನ್ಸ್, ಫಿಟ್ ನೆಸ್ ಸರ್ಟಿಫಿಕೆಟ್ ಇಲ್ಲದ ಆಟೋಗಳನ್ನು ಸದ್ಯ ವಶಕ್ಕೆ ಪಡೆಯಲಾಗುತ್ತಿದೆ.

ಆಟೋ ರಿಕ್ಷಾಗಳು ಯಾವುದೇ ಪರ್ಮಿಟ್ ಇಲ್ಲದೇ, ಕಾನೂನು ಬಾಹಿರವಾಗಿ ಸಂಚರಿಸುತ್ತಿರುವ ಪರಿಣಾಮ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಅಲ್ಲದೇ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುವುದು, ಎಲ್ಲೆಂದರಲ್ಲಿ ಏಕಾಏಕಿ ನಿಲ್ಲಿಸುವ ಮೂಲಕ ಸಂಚಾರ ನಿಯಮ ಪಾಲಿಸದೇ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ‌ ಬಂದ ದೂರಿನ ಮೇರೆಗೆ ಇಂದು ಪೊಲೀಸರು ಆಟೋ ರಿಕ್ಷಾಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ….

ಪೊಲೀಸರು ಎಷ್ಟೇ ಎಚ್ಚರಿಕೆ, ಸೂಚನೆ ನೀಡಿದರೂ ಬಹುತೇಕ ಆಟೋ ಚಾಲಕರು ಸಮವಸ್ತ್ರ ಧರಿಸದೇ ಆಟೋ ಓಡಿಸುತ್ತಿರುವುದು ಕಂಡುಬಂದಿದೆ. ಪೊಲೀಸರ ಕಣ್ಣು ತಪ್ಪಿಸಿ ಕಾನೂನು ಬಾಹಿರವಾಗಿ ಆಟೋ ಓಡಿಸುವವರ ಹಾವಳಿ ಮಿತಿ ಮೀರಿದ್ದು, ಇದಕ್ಕೆ ಕಡಿವಾಣ ಅಗತ್ಯವಾಗಿದೆ.

ಆಟೋ ರಿಕ್ಷಾ ಚಾಲಕರಿಗೆ ಜಾಗೃತಿ ಮೂಡಿಸುವ ಜೊತೆಗೆ ದಾಖಲೆ ಪತ್ರಗಳಿಲ್ಲದೇ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುತ್ತಿದ್ದಾರೆ. ಆಟೋ ರಿಕ್ಷಾ ಚಾಲಕರು ಸಂಚಾರ ನಿಯಮ ಪಾಲಿಸಬೇಕು ಸಾರ್ವಜನಿಕರಿಗೆ ಪ್ರಯಾಣಿಕರಿಗೆ ತೊಂದರೆ ನೀಡಬಾರದು. ಪ್ರಯಾಣಕರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಪೊಲೀಸರು ಸೂಚಿಸಿದ್ದಾರೆ.

Ramesh Babu

Journalist

Recent Posts

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

14 minutes ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

16 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

21 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago