Categories: ಕೋಲಾರ

ಪ್ರಚಾರದ ಕೊರತೆ: ನೈಜತೆ ಕಳೆದುಕೊಂಡ ಜನಪರ ಉತ್ಸವ ಬೇಕಾಬಿಟ್ಟಿ ಖರ್ಚಿಗೆ ಸೀಮಿತ -ನಾಗನಾಳ ಮುನಿಯಪ್ಪ ಖಂಡನೆ

ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು

ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು

ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು

Ramesh Babu

Journalist

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

7 hours ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

8 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

8 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

9 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

21 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

22 hours ago