Categories: ಕೋಲಾರ

ಪ್ರಚಾರದ ಕೊರತೆ: ನೈಜತೆ ಕಳೆದುಕೊಂಡ ಜನಪರ ಉತ್ಸವ ಬೇಕಾಬಿಟ್ಟಿ ಖರ್ಚಿಗೆ ಸೀಮಿತ -ನಾಗನಾಳ ಮುನಿಯಪ್ಪ ಖಂಡನೆ

ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು

ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು

ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು

Ramesh Babu

Journalist

Recent Posts

ಉನ್ನಾವೋ…..

  ಉನ್ನಾವೋ........ ಉನ್ನಾವೋ ಅತ್ಯಾಚಾರ, ಕುಲದೀಪ್ ಸಿಂಗ್ ಸೇಂಗರ್, ದೆಹಲಿ ಹೈಕೋರ್ಟ್ ಜಾಮೀನು ತೀರ್ಪು, ಭಾರತ ನ್ಯಾಯಾಂಗ ವ್ಯವಸ್ಥೆಯ ಕಾರ್ಯ…

1 hour ago

ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಅವಾಜ್… ಬಿತ್ತು ಎಫ್ ಐಆರ್..!

ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು…

2 hours ago

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…

5 hours ago

ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…

7 hours ago

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

10 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago