Categories: ಕೋಲಾರ

ಪ್ರಚಾರದ ಕೊರತೆ: ನೈಜತೆ ಕಳೆದುಕೊಂಡ ಜನಪರ ಉತ್ಸವ ಬೇಕಾಬಿಟ್ಟಿ ಖರ್ಚಿಗೆ ಸೀಮಿತ -ನಾಗನಾಳ ಮುನಿಯಪ್ಪ ಖಂಡನೆ

ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು

ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು

ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

13 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago