ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು
ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು
ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…