ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು
ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು
ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…