Categories: ಕೋಲಾರ

ಪ್ರಚಾರದ ಕೊರತೆ: ನೈಜತೆ ಕಳೆದುಕೊಂಡ ಜನಪರ ಉತ್ಸವ ಬೇಕಾಬಿಟ್ಟಿ ಖರ್ಚಿಗೆ ಸೀಮಿತ -ನಾಗನಾಳ ಮುನಿಯಪ್ಪ ಖಂಡನೆ

ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು

ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು

ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

2 minutes ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

3 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

5 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

16 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

21 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

22 hours ago